Advertisement

ಹಟ್ಟಿ ಚಿನ್ನದ ಗಣಿ ಕಂಪನಿ ನೌಕರ ನೇಣಿಗೆ ಶರಣು

04:48 PM Nov 15, 2021 | Team Udayavani |

ಹಟ್ಟಿಚಿನ್ನದಗಣಿ: ಹಟ್ಟಿ ಚಿನ್ನದ ಗಣಿ ನೌಕರನೊಬ್ಬ ನೇಣಿಗೆ ಶರಣಾದ ಘಟನೆ ಸೋಮವಾರ ನಡೆದಿದೆ.

Advertisement

ಸಂತ ಸೇವಾಲಾಲ ಬಂಜಾರ ನೌಕರರ ಸಂಘದ ಅಧ್ಯಕ್ಷ ಬಾಬು ರಾಥೋಡ(51) ನೇಣಿಗೆ ಶರಣಾಗಿದ ನೌಕರ ಎನ್ನಲಾಗಿದೆ.

ಕ್ಯಾಂಪ್ ಪ್ರದೇಶದಲ್ಲಿರುವ ಬಂಜಾರ ನೌಕರರ ಸಂಘದ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಹಟ್ಟಿ ಪೊಲೀಸರ ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ. ಇನ್ನೂ ಪ್ರಕರಣ ದಾಖಲಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next