Advertisement

ಬೈಕ್ ಅಪಘಾತ: ಅಂಬ್ಯುಲೆನ್ಸ್ ವಾಹನದಲ್ಲೇ ಮೃತಪಟ್ಟ ಸವಾರ

12:38 PM Apr 28, 2021 | Team Udayavani |

ಹುಬ್ಬಳ್ಳಿ: ತಾಲೂಕಿನ ವರೂರ ಬಳಿ ಮುಂದೆ ಹೋಗುತ್ತಿದ್ದ ವಾಹನಕ್ಕೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.

Advertisement

ಅಪಘಾತದಲ್ಲಿ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಯಲವಿಗಿ ಗ್ರಾಮದ ಇರ್ಫಾನ್ ಹುಸೇನ್ ಸಾಬ್ ಕ್ಯಾಲಕೊಂಡ (24) ಮೃತಪಟ್ಟಿದ್ದಾನೆ.

ಇದನ್ನೂ ಓದಿ : ವಿಜಯಪುರ : ಕರ್ಫ್ಯೂ ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳ ಜಪ್ತಿ

ಇರ್ಫಾನನು ಬೈಕ್ ನಲ್ಲಿ ಹೊರಟಿದ್ದಾಗ ಎದುರಿಗೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಾಗ ತಲೆಗೆ ಬಲವಾದ ಹೊಡೆತ ಬಿದ್ದು ಗಂಭೀರ ಗಾಯಗೊಂಡಿದ್ದ. ಕಿಮ್ಸ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಆಸ್ಪತ್ರೆ ಸಮೀಪದಲ್ಲೇ ಮೃತಪಟ್ಟನೆಂದು ಪೊಲೀಸ್ ಮೂಲಗಳು ತಿಳಿಸಿವೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next