Advertisement

ಹುಮನಾಬಾದ್: ಕಾರ್ಖಾನೆಯಲ್ಲಿ ಕೆಮಿಕಲ್ ರಿಯಾಕ್ಷನ್ ನಿಂದ ಓರ್ವ ಸಾವು; ಮೂವರು ಅಸ್ವಸ್ಥ

05:19 PM Jul 13, 2022 | Team Udayavani |

ಹುಮನಾಬಾದ್: ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ  ಕೆಮಿಕಲ್ ರಿಯಾಕ್ಷನ್ ನಿಂದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

Advertisement

ಬೆಳಗಾವಿ ಜಿಲ್ಲೆಯ ವ್ಯಕ್ತಿ ಗುರುಪ್ರಸಾದ (45) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೈಗಾರಿಕಾ ಪ್ರದೇಶದಲ್ಲಿನ ಸ್ಯೂಟಿಕ್ ಲ್ಯಾಬ್ಸ್ ಕಾರ್ಖಾನೆಯಲ್ಲಿ ಔಷಧಿಗಳಿಗೆ ಬಳಸುವ ಪೌಡರ್ ತಯಾರಿಸುವ ಸಂದರ್ಭದಲ್ಲಿ ಈ ಅವಘಡ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಇನ್ನೂ ಮೂರು ಜನರು ಅಸ್ವಸ್ಥ ಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಕರ್ತವ್ಯದ ಸಮಯದಲ್ಲಿ ಸಿಬ್ಬಂದಿಗಳು ಕುಸಿದು ಬಿದ್ದ ಹಿನ್ನೆಲೆಯಲ್ಲಿ ಕಾರ್ಖಾನೆಯ ಸಿಬ್ಬಂದಿಗಳು ಪಟ್ಟಣದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿರುವುದು ಖಚಿತಪಟ್ಟಿದೆ.

ಘಟನೆಯ ಕುರಿತು ಕಾರ್ಖಾನೆ ಮುಖಂಡರು ಯಾರು ಹೆಚ್ಚಿನ ಮಾಹಿತಿ ಸದ್ಯಕ್ಕೆ ನೀಡುತ್ತಿಲ್ಲ. ಕಾರ್ಖಾನೆಗೆ ಹುಮ್ನಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ಮಂಜನ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next