Advertisement

ಅಪ್ರಾಪ್ತ ಮಗಳ ಮದುವೆ ಮಾಡಿದ್ದ ಪೋಷಕರಿಗೆ ಬಿಗ್ ಶಾಕ್: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

07:38 PM Nov 06, 2021 | Team Udayavani |

ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬಿ.ಡಿ.ಪುರ ಗ್ರಾಪಂ ವ್ಯಾಪ್ತಿಯ ಅವಲಪಾಳ್ಯದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಮೃತ ದೇಹ ಪತ್ತೆಯಾಗಿದೆ.

Advertisement

ಆರೋಪಿ ಲಕ್ಷ್ಮಿಪತಿ ಬಿನ್ ನರಸಿಂಹಯ್ಯ(25), ತನ್ನ ಸಂಬಂಧಿ ಅದೇ ಗ್ರಾಮದ 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಾಲ್ಯ ವಿವಾಹವಾಗಿ ಆಕೆಯ ಮೇಲೆ ದೈಹಿಕ, ಮಾನಸಿಕ ಹಿಂಸೆ ನೀಡಿ ತನ್ನ ವಾಸದ ಮನೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡುವ ಉದ್ದೇಶದಿಂದ ಉಸಿರುಗಟ್ಟಿಸಿದ್ದರಿಂದಲೂ ಅಥವಾ ಬೇರೆ ಇನ್ನಾವುದೋ ರೀತಿಯಿಂದಲೂ ಕೊಲೆ ಮಾಡಿ ಆರೋಪಿಯು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿ ಫೋಕ್ಸೋ ಕಾಯ್ದೆ ಅಡಿಯಲ್ಲಿ ಕೊರಟಗೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯ ಮೇಲ್ವಿಚಾರಕಿರವರು ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಸ್ಥಳಕ್ಕೆ ಮಧುಗಿರಿ  ಉಪವಿಭಾಗದ ಡಿವೈಎಸ್ಪಿ ರಾಮಕೃಷ್ಣ ಕೆ.ಜಿ., ಪಿಎಸ್ಐ ನಾಗರಾಜು. ಬಿ , ಪಿಎಸ್ಐ ಶ್ರೀ ಮತಿ ಮಂಜಳಾ ಸಿಬ್ಬಂದಿಗಳಾದ ಎಎಸ್ಐ ಮಂಜುನಾಥ್, ಮುಖ್ಯ ಪೇದೆ ರಾಜಶೇಖರಯ್ಯ,ಗಂಗಾಧರಪ್ಪ, ಪೇದೆ ರಂಗನಾಥ್ ಇತರರು ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next