Advertisement

ಕುಣಿಗಲ್: ಚಿಕ್ಕಕೆರೆ ಕೋಡಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಅಪರಿಚಿತ ವ್ಯಕ್ತಿ ಸಾವು

12:11 PM Aug 09, 2022 | Team Udayavani |

ಕುಣಿಗಲ್: ಕುಣಿಗಲ್  ಪಟ್ಟಣದ ಚಿಕ್ಕಕೆರೆ ಕೋಡಿ ನೀರಿನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಕೊಚ್ಚಿಕೊಂಡು ಹೋಗಿ  ಮೃತಪಟ್ಟಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮದ ಬಳಿ ನಡೆದಿದೆ.

Advertisement

ಮೃತ  ವ್ಯಕ್ತಿ ಹೆಸರು ವಿಳಾಸ ತಿಳಿದು ಬಂದಿಲ್ಲ. 22 ವರ್ಷದ ಬಳಿಕ ಕೆರೆ ಕೋಡಿಯಾಗಿದ್ದು ನಾಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಈ ವೇಳೆ ವ್ಯಕ್ತಿಯು ನಾಲೆಯಲ್ಲಿ ಕಾಲು ಜಾರಿ ಬಿದ್ದಿರ ಬಹುದೆಂದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯು ನೀರಿನಲ್ಲಿ ತೇಲಿಕೊಂಡು ಹೋಗಿ ಹೇರೂರು ಸಮೀಪದ ವಿಮಾಲ ಶಂಕರ್ ಅವರ ತೋಟದ ದಡದ ಬಳಿ ಶವವಾಗಿ  ಪತ್ತೆಯಾಗಿದ್ದು, ಮೃತ ದೇಹ ಗುರುತು ಸಿಗದಂತ್ತಾಗಿದೆ.  ಮೃತನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಕುಣಿಗಲ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next