Advertisement

ಪ್ರೇಮ ಪ್ರಕರಣ; ತಿರಗಲು ಬಂದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಚೂರಿ ಇರಿತ: ಆರೋಪಿ ವಶಕ್ಕೆ

05:20 PM Aug 13, 2022 | Team Udayavani |

ಮಡಿಕೇರಿ: ವ್ಯಕ್ತಿಯೊಬ್ಬ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.

Advertisement

ಇದೊಂದು ಪ್ರೇಮ ಪ್ರಕರಣ ಎಂದು ಹೇಳಲಾಗುತ್ತಿದ್ದು, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಇದ್ದುದ್ದನ್ನು ಗಮನಿಸಿದ ಆರೋಪಿ ಚಾಕುವಿನಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿಗೆ ಇರಿಯುವಾಗ ಅಡ್ಡ ಬಂದ ವಿದ್ಯಾರ್ಥಿನಿಗೂ ಇರಿದಿರುವುದಾಗಿ ಹೇಳಲಾಗಿದೆ. ಆರೋಪಿಯನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಹಾಸನ: ವಿವಾಹ ವಿಚ್ಛೇದನ ಪ್ರಕರಣ; ಕೋರ್ಟ್‌ ಆವರಣದಲ್ಲೇ  ಪತ್ನಿ ಕತ್ತು ಕೊಯ್ದು ಹತ್ಯೆಗೈದ ಪತಿ

ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ  ದಾಖಲಿಸಲಾಗಿದ್ದು, ಕುಶಾಲನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಘಟನೆಯಿಂದ ಪ್ರವಾಸಿಗರು ಆತಂಕಗೊoಡರು.

ಹಲ್ಲೆಗೊಳಗಾದ ಇಬ್ಬರು ಕುಶಾಲನಗರದ ಸರಕಾರಿ ಕಾಲೇಜು ವಿದ್ಯಾರ್ಥಿಗಳಾಗಿದ್ದು, ಆರೋಪಿ ಹೋಟೇಲ್ ನ ಸಪ್ಲಯರ್ ಆಗಿದ್ದಾನೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next