Advertisement

ಸೇತುವೆ ಮೇಲಿಂದ ಬೈಕ್ ನಿಂದ ಕೆಳಗೆ ಬಿದ್ದಿರುವ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ:ಕೊಲೆ ಶಂಕೆ

01:42 PM May 22, 2021 | Team Udayavani |

ಮಂಡ್ಯ: ಸೇತುವೆ ಮೇಲಿಂದ ಬೈಕ್ ನಿಂದ ಕೆಳಗೆ ಬಿದ್ದಿರುವ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹೊಂಗಳ್ಳಿ ಗ್ರಾಮದ ಬಳಿ ನಡೆದಿದೆ.

Advertisement

ಹೊಂಗಳ್ಳಿ ಗ್ರಾಮದ ಅಶೋಕ್(39) ಮೃತ ವ್ಯಕ್ತಿ. ಅನುಮಾನಾಸ್ಪದವಾಗಿ ವ್ಯಕ್ತಿ ಸಾವನ್ನಪ್ಪಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಸೇತುವೆ ಮೇಲಿಂದ ಬೈಕ್ ಸಹಿತ ಹಳ್ಳಕ್ಕೆ ಬಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕೆಆರ್ ಎಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಕೋವಿಡ್ ಸಂಕಷ್ಟದಲ್ಲೂ ಅದ್ದೂರಿ ಮದುವೆ: ಒಂದೇ ವೇದಿಕೆಯಲ್ಲಿ ನಾಲ್ವರ ಮದುವೆ

ಶವದ ಮೇಲೆ ರಕ್ತದ ಕಲೆ ನೋಡಿ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕೆಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next