Advertisement

ಮಂಗಳೂರು: ಕುಡಿದ ಮತ್ತಿನಲ್ಲಿ ರಂಗೋಲಿ ವಿರೂಪಗೊಳಿಸಿದ ಯುವಕರು; ವಿಡಿಯೋ ವೈರಲ್

04:16 PM Oct 26, 2022 | Team Udayavani |

ಮಂಗಳೂರು: ದೀಪಾವಳಿ ಹಬ್ಬಕ್ಕೆ ಬಿಡಿಸಿದ ರಂಗೋಲಿಯನ್ನು ಕುಡಿದ ಮತ್ತಿನಲ್ಲಿ ಕೆಲ ಯುವಕರು ವಿರೂಪಗೊಳಿಸಿ ದುರ್ವರ್ತನೆ ತೋರಿದ ಘಟನೆ ನಗರದ ಬಿಜೈಯಲ್ಲಿ ನಡೆದಿದೆ.

Advertisement

ಅಪಾರ್ಟ್‌ ಮೆಂಟ್‌ ವೊಂದರಲ್ಲಿ ದೀಪಾವಳಿ ಹಬ್ಬಕ್ಕೆ ರಂಗೋಲಿ ಬಿಡಿಸಿ, ಹಬ್ಬದ ಶುಭಾಶಯವನ್ನು ರಂಗೋಲಿಯಲ್ಲಿ ಬರೆದಿದ್ದಾರೆ. ಈ ದೀಪಾವಳಿ ರಂಗೋಲಿಯನ್ನು ಕೇರಳ ಮೂಲದವರೆನ್ನಲಾದ ಕೆಲವು ವಿದ್ಯಾರ್ಥಿಗಳು ವಿರೂಪಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಕೈಯಲ್ಲಿ ಮಧ್ಯದ ಬಾಟಲಿಯನ್ನು ಹಿಡಿದುಕೊಂಡಿದ್ದಾನೆ, ಮತ್ತೊಬ್ಬ ರಂಗೋಲಿಯನ್ನು ಮೆಟ್ಟಿ, ಅದನ್ನು ವಿರೂಪಗೊಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈಗಾಗಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ತಿಳಿದು ಬಂದಿದೆ

ಶಾಸಕ ವೇದವ್ಯಾಸ್‌ ಕಾಮತ್‌ ಫೇಸ್‌ ಬುಕ್‌ ನಲ್ಲಿ ಈ ವಿಡಿಯೋ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿ, ಪೊಲೀಸರ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next