Advertisement

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು

06:30 PM Nov 01, 2021 | Team Udayavani |

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನರಿಮೊಗರಿನಲ್ಲಿ ಸೋಮವಾರ ನಡೆದಿದೆ.

Advertisement

ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿದ್ದು ಆಕ್ಟಿವಾ ಸವಾರ ಪೇರಮೊಗರಿನ ಸೋಮ ಶೇಖರ್‌ ರೈ ಎಂಬವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಸವಣೂರು ಕಡೆ ತೆರಳುತ್ತಿದ್ದ ಡಿಸೈರ್‌ ಕಾರು ಮತ್ತು ಸವಣೂರಿನಿಂದ ಪುತ್ತೂರಿಗೆ ಬರುತ್ತಿದ್ದ ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ.

ಗಂಭೀರ ಗಾಯಗೊಂಡಿದ್ದ ಸೋಮಶೇಖರ ರೈರವರನ್ನು ಹಿಂದೂ ಸಂಘನೆಯ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ರವರು ತಮ್ಮ ಕಾರಿನಲ್ಲಿ ಕರೆತಂದಿದ್ದು ದಾರಿ ಮಧ್ಯದಲ್ಲಿ ಆಂಬ್ಯಲೆನ್ಸ್‌ ಗೆ ಶಿಫ್ಟ್‌ ಮಾಡಿ ಪುತ್ತೂರು ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ಸೋಮಶೇಖರ್‌ ರೈ ಮೃತಪಟ್ಟಿದ್ದರೆಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next