Advertisement

ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಡೆತ್‌ ನೋಟ್‌ ನಲ್ಲಿ ಪ್ರಭಾವಿ ರಾಜಕಾರಣಿ ಹೆಸರು ಉಲ್ಲೇಖ

10:09 AM Jan 02, 2023 | Team Udayavani |

ರಾಮನಗರ: ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ ನಿವಾಸಿ ಪ್ರದೀಪ್‌ (47)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಡೆತ್‌ ನೋಟ್‌ ಬರೆದಿಟ್ಟು ತನ್ನ ಕಾರಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಣಕಾಸಿನ ವಿಚಾರಕ್ಕೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಪ್ರಭಾವಿ ರಾಜಕಾರಣಿಗಳ ಹೆಸರು ಸೇರಿದಂತೆ ಒಟ್ಟು ಆರು ಜನರ ಹೆಸರು ಬರೆದಿಟ್ಟು ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಘಟನೆ ನಡೆದಿದ್ದು ಕಗ್ಗಲಿಪುರ ಪೊಲೀಸ್‌ ಠಾಣಾ ವ್ಯಾಪ್ತಿಯಾಗಿರುವ ಹಿನ್ನೆಲೆ ಘಟನಾ ಸ್ಥಳಕ್ಕೆ ರಾಮನಗರ ಜಿಲ್ಲಾ ಪೋಲೀಸ್‌ ವರಿಷ್ಠಾಧಿ ಕಾರಿಗಳು ಭೇàಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಲಿಂಬಾವಳಿ ಸೇರಿ ಆರು ಮಂದಿ ಹೆಸರು ಉಲ್ಲೇಖ:

Advertisement

ಬೆಂಗಳೂರು: ಕಗ್ಗಲಿಪುರ ಠಾಣೆ ವ್ಯಾಪ್ತಿಯಲ್ಲಿ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಸೇರಿ ಇತರೆ 6 ಮಂದಿ ಹೆಸರು ಉಲ್ಲೇಖೀಸಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರದೀಪ್‌ ಎಂಬಾತನ ವಿರುದ್ಧ ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ಪತ್ನಿ ಮೇಲೆ ಹಲ್ಲೆ ಹಾಗೂ ಹಿಂಸೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ನಮೀತಾ ಎಂಬುವರು ನೀಡಿದ ದೂರಿನ ಮೇರೆಗೆ ಮೇ 7ರಂದು ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರದೀಪ್‌ 2004ರಲ್ಲಿ ನಮೀತಾರನ್ನು ಮದುವೆಯಾಗಿದ್ದು, ದಂಪತಿಗೆ ಒಂದು ಹೆಣ್ಣು ಮಗು ಇದೆ. ಈ ಮಧ್ಯೆ ಪ್ರದೀಪ್‌, ಸಣ್ಣ-ಪುಟ್ಟ ವಿಚಾರಕ್ಕೆ ಪತ್ನಿ ಮೇಲೆ ಹಲ್ಲೆ ನಡೆಸುತ್ತಿದ್ದ. ಬಳಿಕ ನಮೀತಾ ಪೋಷಕರು ಅಳಿಯನಿಗೆ ಬುದ್ಧವಾದ ಹೇಳಿ ರಾಜಿ-ಸಂಧಾನ ಮಾಡಿದ್ದರು. ಆದರೂ ಹಿಂಸೆ ನೀಡುತ್ತಿದ್ದ ಎಂದು ನಮೀತಾ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಮೇ 6ರಂದು ಪರಪುರಷನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಗಂಭೀರವಾಗಿ ಹಲ್ಲೆ ನಡೆಸಿದ್ದ. ಗಾಯಗೊಂಡಿದ್ದ ನಮೀತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಈ ಸಂಬಂಧ ದೂರು ನೀಡಿದ್ದರು. ಬಳಿಕ ಪ್ರದೀಪ್‌ನನ್ನು ವಿಚಾರಣೆ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next