Advertisement

ಸಿಂದಗಿ: ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

11:34 AM Nov 02, 2021 | Team Udayavani |

ಸಿಂದಗಿ: ಬಿಜೆಪಿ ಕಾರ್ಯಕರ್ತರೊಬ್ಬರ ಲಾಟಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆ ಮಾಡುವ ಯತ್ನ ತಾಲೂಕಿನ ನಾಗಾವಿ ಬಿಕೆ ಗ್ರಾಮದಲ್ಲಿ ಮಂಗಳವಾರ ನಸುಕಿನ 5 ವೇಳೆಗೆ ನಡೆದಿದೆ.

Advertisement

ಗ್ರಾಮದ ಬಿಜೆಪಿ ಕಾರ್ಯಕರ್ತರ ಗುರಣ್ಣ ಸಿದ್ದನಗೌಡ ಬಿರಾದಾರ (30) ಮಂಗಳವಾರ ಬೆಳೆಗಳಿಗೆ ನೀರು ಬಿಡಲು ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಗುರಣ್ಣನ ಮುಖಕ್ಕೆ ಬಟ್ಟೆ ಮುಚ್ಚಿ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಗುರಣ್ಣನ ಕುತ್ತಿಗೆ ಮತ್ತು ಕಾಲಿಗೆ ಚಾಕುವಿನಿಂದ ಇರಿದಿದ್ದಾರೆ.ಕುತ್ತಿಗೆ ಮತ್ತು ಕಾಲಿಗೆ ಕೊಯ್ದ ರೀತಿಯಲ್ಲಿ ಗಾಯವಾಗಿವೆ. ಹಲ್ಲೆ ಮಾಡಿದ ಇಬ್ಬರೂ ಮುಖಕ್ಕೆ ಸ್ಕಾರ್ಫ್ ಸುತ್ತಿಕೊಂಡಿದ್ದರು. ಯಾವುದೇ ಮಾತನಾಡದೇ ಈ ಕೃತ್ಯ ಎಸಗಿದ್ದಾರೆ.

ಗುರಣ್ಣನಿಗೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಪೋಲಿಸರು ಬೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next