Advertisement

ಶ್ರೀರಂಗಪಟ್ಟಣ: ಗೂಡ್ಸ್ ವಾಹನ ಚಾಲಕನ ಬರ್ಬರ ಹತ್ಯೆ

11:37 AM Dec 07, 2021 | Team Udayavani |

ಶ್ರೀರಂಗಪಟ್ಟಣ: ಗೂಡ್ಸ್ ವಾಹನ ಚಾಲಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕೊಲೆಯಾದ ಯುವಕನ್ನು ಬೆಂಗಳೂರು ಮೂಲದ ಗಜೇಂದ್ರ (26) ಎಂದು ಗುರುತಿಸಲಾಗಿದೆ.

ತಾಲೂಕಿನ ಕೆ.ಶೆಟ್ಟಹಳ್ಳಿ ಬಳಿಯ ಗಾರ್ಮೆಂಟ್ಸ್ ಪಕ್ಕದ ಜಮೀನಿನ ಬಳಿ ವಾಹನವನ್ನು ನಿಲ್ಲಿಸಿ, ಆತನನ್ನು ಎಳೆದೊಯ್ದು ಬರ್ಬರವಾಗಿ ಹತ್ಯೆ ಮಾಡಿ ಶವವನ್ನು ಜಮೀನಿಗೆ ಎಸೆದು ಹೋಗಿದ್ದಾರೆ.

ಸ್ಥಳಕ್ಕೆ ಎಸ್ಪಿ ಸೇರಿದಂತೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next