Advertisement

ಸುರತ್ಕಲ್ : ಮತ್ತೆ ಮುಂದುವರೆದ ನೈತಿಕ ಪೊಲೀಸ್ ಗಿರಿ; ಆರು ಜನ ಆರೋಪಿಗಳ ಬಂಧನ

11:54 AM Nov 16, 2021 | Team Udayavani |

ಮಂಗಳೂರು: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ಯುವಕ – ಯುವತಿಯನ್ನು ತಡೆದು ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.

Advertisement

ಘಟನೆಯ ವಿವರ: ಯುವತಿ ಅಪಾರ್ಟ್ ಮೆಂಟ್ ಖಾಲಿ ಮಾಡುತ್ತಿದ್ದುದರಿಂದ ಲಗೇಜ್ ಶಿಫ್ಟ್ ಮಾಡಿ ಯುವಕ ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರನ್ನು 5-6 ಜನರ ಗುಂಪು ಫಾಲೋ ಮಾಡಿದ್ದಾರೆ. ಹಿಂಬಾಲಿಸಿದ ಗುಂಪು, ಯುವಕ -ಯುವತಿಯನ್ನು ವಿಚಾರಿಸಿ, ಅವರ ಮೂಲವನ್ನು ತಿಳಿದಕೊಂಡು, ಅನ್ಯ ಧರ್ಮದ ಯುವಕನನ್ನು ನಿಂದಿಸಿ, ಥಳಿಸಿದ್ದಾರೆ. ಇದಾದ ಬಳಿಕ ಯುವಕ ಹಲ್ಲೆ ಮಾಡಿದವರ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.

ಪ್ರಕರಣ ದಾಖಲಿಸಿ, ತಕ್ಷಣ ಕಾರ್ಯಚರಣೆಗೆ ಇಳಿದ ಪೊಲೀಸರು ಆರೋಪಿಗಳಾದ ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್ ಹಾಗೂ ಸುಖೇಶ್ ರನ್ನು ಬಂಧಿಸಿದ್ದಾರೆ.

ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next