Advertisement

ಉಡುಪಿ: ಇಂದ್ರಾಳಿಯಲ್ಲಿ ತಾಯಿಗೆ ನಿಂದಿಸಿದಕ್ಕೆ ವ್ಯಕ್ತಿಯ ತಲೆಗೆ ಸೊಂಟೆಯಿಂದ ಹೊಡೆದು ಕೊಲೆ

08:40 PM Jul 21, 2022 | Team Udayavani |

ಉಡುಪಿ: ಕುಡಿದ ಅಮಲಿನಲ್ಲಿ ತಾಯಿಗೆ ನಿಂದಿಸಿದ ಎಂದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮಣಿಪಾಲದ ರಾ. ಹೆದ್ದಾರಿ 169A ನಿಂದ ಇಂದ್ರಾಳಿ ರೈಲ್ವೆ ನಿಲ್ದಾಣದ ಕಡೆಗೆ ಹೋಗುವ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ.

Advertisement

ತಮಿಳುನಾಡು ಮೂಲದ ಕುಮಾರ್ (32) ಕೊಲೆಯಾದ ವ್ಯಕ್ತಿ.

ಕುಟ್ಟಿ ಮತ್ತು ನವೀನ್ ಎಂಬುವವರು ಇಂದ್ರಾಳಿ ಬಾರ್ ನಿಂದ ಮದ್ಯಪಾನ ಮಾಡಿ ನಡೆದುಕೊಂಡು ಬರುವಾಗ  ಕುಮಾರ್ ಎಂಬುವವನು ಕುಡಿದ ಅಮಲಿನಲ್ಲಿ ನವೀನ್ ಮತ್ತು ಕುಟ್ಟಿಯ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದು, ಮೂವರ ನಡುವೆ ಮಾತಿಗೆ ಮಾತು ಬೆಳೆದಿರುತ್ತದೆ.

ನಂತರ ನವೀನ್ ಮತ್ತು ಕುಟ್ಟಿ ಸೇರಿ ಮರದ ಸೊಂಟೆಯಿಂದ ಕುಮಾರನ ತಲೆಗೆ ಹೊಡೆದಾಗ ಆತನು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ಮೃತದೇಹವನ್ನು ಉಡುಪಿ ಅಜ್ಜರ ಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಉಡುಪಿ ನಗರ ಠಾಣಾ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next