Advertisement

ಉಳ್ಳಾಲ: ಆರನೇ ಮಹಡಿಯಿಂದ ಬಿದ್ದು ಸೆಕ್ಯುರಿಟಿ ಗಾರ್ಡ್ ಸಾವು

11:58 PM Jan 25, 2021 | Team Udayavani |

ಉಳ್ಳಾಲ : ಕರ್ತವ್ಯ ನಿರತ ಸೆಕ್ಯುರಿಟಿ ಗಾರ್ಡ್ ಓರ್ವರು ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಯೆನೆಪೋಯ ಬಳಿಯ ಹಸನ್ ಛೇಂಬರ್ಸ್ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ವೇಳೆ ನಡೆದಿದೆ.

Advertisement

ಕುತ್ತಾರು ಮಜಲುತೋಟ ನಿವಾಸಿ ಸತೀಶ್ (38) ಮೃತರು. ಸಂಜೆ ಕರ್ತವ್ಯಕ್ಕೆ ಹಾಜರಾಗಿದ್ದ ಸತೀಶ್ ರಾತ್ರಿ ಆರನೇ ಮಹಡಿಗೆ ತೆರಳಿ ಲಿಫ್ಟ್ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಆಯತಪ್ಪಿ ಆರನೇ ಮಹಡಿಯಿಂದ ಕೆಳಗೆ ಬಿದ್ದ ಸತೀಶ್ ತಲೆಗೆ ಗಂಭೀರ ಗಾಯಗೊಂಡು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಹುದ್ಯೋಗಿಯೋರ್ವರು ಅಪಾಯದ ಮುನ್ಸೂಚನೆ ನೀಡಿದ್ದರೂ ಸತೀಶ್ ತೆರಳಿದ್ದರೆನ್ನಲಾಗಿದೆ.

 

ಇದನ್ನೂ ಓದಿ : ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್‌ನಾರಾಯಣ

Advertisement

Udayavani is now on Telegram. Click here to join our channel and stay updated with the latest news.

Next