Advertisement

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

06:38 PM Oct 19, 2021 | Team Udayavani |

ಉಳ್ಳಾಲ:  ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

Advertisement

ಗ್ಯಾಸ್ ರಿಪೇರಿ ಅಂಗಡಿ ಮಾಲೀಕ ಹರೀಶ್ ಎಂಬವವರು ಚೂರಿ ಇರಿತಕ್ಕೆ ಒಳಗಾದವರು. ಮೊಗವೀರಪಟ್ನ ನಿವಾಸಿಯೊಬ್ಬ ವಿಶಾಲ್ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ವೈಯಕ್ತಿಕ ದ್ವೇಷದಿಂದ ನಡೆದಿರುವ ಕೃತ್ಯ ಎಂದು ಶಂಕಿಸಲಾಗಿದೆ. ಸದ್ಯ ವಿಶಾಲ್ ಗಾಗಿ ಹುಡುಕಾಟ ನಡೆಯುತ್ತಿದೆ.

ಉಳ್ಳಾಲ ಪೊಲೀಸರು ಗಾಯಾಳುವನ್ನು ತೊಕ್ಕೊಟ್ಟು ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next