Advertisement

ಉಪ್ಪಿನಂಗಡಿ: ಮನೆಗೆ ನುಗ್ಗಿ 1.20 ಲಕ್ಷ ಹಣ ಮತ್ತು 10 ಪವನ್ ಚಿನ್ನ ದೋಚಿದ ಕಳ್ಳರು

10:40 PM Sep 16, 2021 | Team Udayavani |

ಉಪ್ಪಿನಂಗಡಿ: ಮನೆಯೊಂದಕ್ಕೆ ಕಳ್ಳರು ನುಗ್ಗಿ, ಸುಮಾರು ಒಂದು ಲಕ್ಷದ ಇಪ್ಪತ್ತು ಸಾವಿರ  ಹಣ ಮತ್ತು ಹತ್ತು ಪವನ್ ಚಿನ್ನದೊಂದಿಗೆ ಪರಾರಿಯಾಗಿರುವ ಘಟನೆ ಬಾರ್ಯ ಗ್ರಾಮದ ಸರಳಿಕಟ್ಟೆಯಲ್ಲಿ ನಡೆದಿದೆ.

Advertisement

ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಾರ್ಯ ಗ್ರಾಮದ ಸರಳಿಕಟ್ಟೆ ಬೇನಪ್ಪು ನಿವಾಸಿ ಅಬೂಬಕ್ಕರ್ ಮದನಿ ರವರ ಮನೆಗೆ ಕಳ್ಳರು ನುಗ್ಗಿದ್ದು ಲಕ್ಷಾಂತರ ಮೌಲ್ಯದ ಚಿನ್ನ, ನಗದನ್ನು ದೋಚಿಕೊಂಡು ಹೋಗಿದ್ದಾರೆ.  ಮನೆ ಮಾಲಕರು ಇಂದು ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.

ಉಪ್ಪಿನಂಗಡಿ ಪೊಲೀಸರುಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಗಾನ .ಪಿ.ಕುಮಾರ್, ಪುತ್ತೂರು ಗ್ರಾಮಾಂತ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಉಪ ನಿರೀಕ್ಷಕ ಕುಮಾರ್ ಸಿ ಕಾಂಬ್ಳೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next