Advertisement

ಹೈವೋಲ್ಟೇಜ್ ವಿದ್ಯುತ್ ಕಂಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ‌ ಪತ್ತೆ…!

06:49 PM Apr 02, 2021 | Suhan S |

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರ ವಲಯದಲ್ಲಿ ಹೈ ವೋಲ್ಟೇಜ್ ವಿದ್ಯುತ್‍ ಕಂಬದಲ್ಲಿ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

Advertisement

ಅವಿವಾಹಿತನಾಗಿರುವ ಸದರಿ ಯುವಕನನ್ನು ಮುದ್ದೇಬಿಹಾಳ ತಾಲೂಕು ಕಂದಗನೂರ ಗ್ರಾಮದ ರಮೇಶ ಸಿದ್ದರಾಮಪ್ಪ ಕಣಕಾಲ (26) ಎಂದು ಆತನ ಬಳಿ ಇರುವ ದಾಖಲೆಗಳಿಂದ ತಿಳಿದುಬಂದಿದೆ.

ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಮುದ್ದೇಬಿಹಾಳ ಪಟ್ಟಣದಲ್ಲೇ ವಾಸವಿದ್ದ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ : ‘ಜಯಲಲಿತಾ ಅಮ್ಮ, ಮೋದಿ ಅಪ್ಪ ಅಂತೆ’ ಎಂದು ಹೇಳಿದ  ದಯಾನಿಧಿ ಮಾರನ್ ವಿರುದ್ಧ ಎಐಎಡಿಎಂಕೆ ದೂರು

ಕಾಲುವೆಯಲ್ಲಿ ಈಜಲು ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದ ಎಂದು ಮೃತನ ಸಹೋದರ ತಿಳಿಸಿದ್ದಾರೆ.

Advertisement

ಶವವನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತರಲಾಗಿದೆ. ಮುದ್ದೇಬಿಹಾಳ ಪೊಲೀಸರು ಸ್ಥಳಕ್ಕೆ ಆಗಮಿಸಿ,  ಕಾನೂನು ಪ್ರಕ್ರಿಯೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next