Advertisement

ವಿಟ್ಲ: ಯುವಕನ ಮೇಲೆ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ದುಷ್ಕರ್ಮಿಗಳು

10:34 AM Jul 04, 2021 | Team Udayavani |

ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಹಾರೀಸ್ ದೂರು ನೀಡಿದ್ದಾರೆ.

ಇದನ್ನೂ ಓದಿ: ಕಾಡಿನಿಂದ ನಾಡಿಗೆ ಬಂದ ಮೂರು ಸಲಗ: ಅರಣ್ಯ ಇಲಾಖೆ ಅಧಿಕಾರಿಗಳ ರೈತರ ಆಕ್ರೋಶ

ಅಬ್ದುಲ್ ಹ್ಯಾರಿಸ್ ಅವರು ಸಾಲೆತ್ತೂರಿನಿಂದ ತನ್ನ ಮನೆಗೆ ಬೈಕ್ ನಲ್ಲಿ ಬರುತ್ತಿದ್ದಾಗ  ಹಿಂದಿನಿಂದ ಬಂದ ಅವಿನಾಶ್, ವಿನೀತ್, ದಿನೇಶ್ ಮತ್ತು ಮತ್ತೊಬ್ಬ ಅಪರಿಚಿತ ವ್ಯಕ್ತಿ ಸೇರಿಕೊಂಡು ಹಾರೀಸ್ ಅವರ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಕೈಯಿಂದ  ಹೊಡೆದು, ಬೈಕಿನಿಂದ ದೂಡಿಹಾಕಿದ್ದು, ಬಳಿಕ ಅವಿನಾಶ್ ಚೂರಿಯಿಂದ ಹಾರೀಸ್ ಅವರ ಬೆನ್ನಿಗೆ ಇರಿದಿದ್ದಾನೆನ್ನಲಾಗಿದೆ. ಬಳಿಕ ನೀನು ನಮ್ಮ ತಂಟೆಗೆ ಬಂದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ತೆರಳಿದ್ದಾರೆ.

Advertisement

ಕೆಲ ಸಮಯದ ಹಿಂದೆ ಅವಿನಾಶನ ತಂಗಿಗೆ ಕೀಟಲೆ ಮಾಡಿದ್ದಾನೆ ಎಂದು ಹಾರೀಸ್ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಪೂರ್ವ ದ್ವೇಷದಿಂದ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next