Advertisement

ವಿಟ್ಲ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ: ಸವಾರ ಸಾವು

02:46 PM Oct 12, 2021 | Team Udayavani |

ವಿಟ್ಲ: ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರಿನ ಕಮ್ಯುನಿಟಿ ಹಾಲ್ ಬಳಿ ದ್ವಿಚಕ್ರವಾಹನಕ್ಕೆ ಢಿಕ್ಕಿಹೊಡೆದ ಅಪರಿಚಿತ ವಾಹನ ಪರಾರಿಯಾಗಿದ್ದು, ವಾಹನ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.

Advertisement

ದ್ವಿಚಕ್ರ ವಾಹನದ ಸವಾರ ನಿಡ್ಪಳ್ಳಿ ನಿವಾಸಿ ಸುರೇಶ್ ನಾಯ್ಕ ಆರ್. (43) ಮೃತಪಟ್ಟವರು. ರಿಬ್ಕೋ ಟ್ರೇಡಿಂಗ್ ಕಂಪನಿಯ ಅಕೌಂಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆಂದು ಅವರ ವಾಹನದಲ್ಲಿ ಸಿಕ್ಕಿದ ದಾಖಲೆಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಉಪ್ಪಿನಂಗಡಿ: ಚಲಿಸುತ್ತಿದ್ದ ಬಸ್ಸಿನಡಿ ಬಿದ್ದು ತಾಯಿ ಮಗು ಸ್ಥಳದಲ್ಲೇ ಸಾವು

ಅಪರಿಚಿತ ವಾಹನದ ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ರಸ್ತೆಗೆ ಬಿದ್ದು, ಮುಖದ ಭಾಗ ಸಂಪೂರ್ಣ ಜಜ್ಜಿಹೋಗಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಕಾರಿನಲ್ಲಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ವೈದ್ಯರು ಪರೀಕ್ಷಿಸಿ, ಮೃತಪಟ್ಟಿದ್ದಾರೆಂದು ದೃಢಪಡಿಸಿದರೆನ್ನಲಾಗಿದೆ.

ಗಾಯಾಳುವನ್ನು ನೋಡಿದ ವ್ಯಕ್ತಿ ವಿಟ್ಲ ಠಾಣೆಗೆ ದೂರು ತಿಳಿಸಿದ್ದಾರೆ. ಅಪಘಾತ ನಡೆಸಿ, ಚಿಕಿತ್ಸೆಯನ್ನು ಕೊಡದೆ ವಾಹನ ಸಹಿತ ಪಲಾಯನ ಮಾಡಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next