Advertisement

ಸೊರಬ: ಅಂಗನವಾಡಿ ಕೇಂದ್ರದ ಮೇಲೆ ಉರುಳಿದ ಮರ; ಅದೃಷ್ಟವಶಾತ್ ಮಕ್ಕಳು ಪಾರು

05:50 PM Aug 08, 2022 | Team Udayavani |

ಸೊರಬ:  ಬಿರುಸಿನ ಗಾಳಿ ಮಳೆಗೆ ಅಂಗನವಾಡಿ ಕೇಂದ್ರದ ಮೇಲೆ ಮರವೊಂದು ಉರುಳಿರುವ ಘಟನೆ ತಾಲೂಕಿನ ಬಾಡದಬೈಲು ಗ್ರಾಮದಲ್ಲಿ ಸೋಮವಾರ ನಡೆದಿದೆ.

Advertisement

ಅಂಗನವಾಡಿ ಕೇಂದ್ರ ತೆರದಿದ್ದ ವೇಳೆಯಲ್ಲಿಯೇ ಮರ ಉರುಳಿದೆ. ಕೇಂದ್ರದಲ್ಲಿ 9 ಮಕ್ಕಳಿದ್ದರು. ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ. ಆದರೆ, ಕೇಂದ್ರದ ಅಡುಗೆ ಕೋಣೆಯ 3 ಪಕಾಸಿ, ಹಂಚುಗಳಿಗೆ ಹಾನಿಯಾಗಿದೆ.

ಸ್ಥಳಕ್ಕೆ ಚಂದ್ರಗುತ್ತಿ ಗ್ರಾಪಂ ಅಧ್ಯಕ್ಷ ಎಂ.ಪಿ. ರತ್ನಾಕರ, ಉಪಾಧ್ಯಕ್ಷೆ ಲಕ್ಷ್ಮಿ ಚಂದ್ರಪ್ಪ, ಸದಸ್ಯರಾದ ರೇಣುಕಾ ಪ್ರಸಾದ್, ತಿರುಪತಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next