Advertisement

ಮುಂಡಾಜೆ ನೇತ್ರಾವತಿ ನದಿಯಲ್ಲಿ ಮುಳುಗಿದ ಕಬಕದ ಹುಡುಗ

09:54 AM Feb 21, 2022 | Team Udayavani |

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ನೇತ್ರಾವತಿ ನದಿಯಗೆ ಸ್ನಾನಕ್ಕೆಂದು ಹೋಗಿದ್ದ ಕಬಕದ ಯುವಕನೋರ್ವ ರವಿವಾರ ಸಂಜೆಯಿಂದ ನಾಪತ್ತೆಯಾದ ಘಟನೆ ನಡೆದಿದೆ.

Advertisement

ನಾಪತ್ತೆಯಾದ ಬಾಲಕನನ್ನು ಪುತ್ತೂರು ತಾಲೂಕು ಕಬಕ ನಿವಾಸಿ ಸುಂದರಿ ಎಂಬವರ ಪುತ್ರ ಕಿರಣ್(20) ಎಂಬವರೆಂದು ತಿಳಿದುಬಂದಿದೆ. ತನ್ನ ಅಜ್ಜಿಮನೆ ಮುಂಡಾಜೆಯ ಪರಮುಖಕ್ಕೆ ಬಂದಿದ್ದ ಸಂದರ್ಭ ಸಹೋದರನ ಜೊತೆ ನದಿಗೆ ಹೋಗಿದ್ದು ಈ ವೇಳೆ ಆಕಸ್ಮಿಕ ನಡೆದಿದೆ ಎನ್ನಲಾಗಿದೆ.

ಸಂಜೆಯೇ ಧರ್ಮಸ್ಥಳ ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿದ್ದು ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದರೂ ಫಲ ದೊರೆತಿರಲಿಲ್ಲ. ಇಂದು ಮತ್ತೆ ಕಾರ್ಯಾಚರಣೆ ಮುಂದುವರಿಸಿದಾಗ ಮೃತದೇಹ ಪತ್ತೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next