Advertisement

Bharamasagara: ಲಾರಿಯನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

11:39 AM Jun 12, 2023 | Team Udayavani |

ಭರಮಸಾಗರ: ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ ಗೇಟ್ ಬಳಿ ಸಂಭವಿಸಿದ ಫಾರ್ಚುನರ್ ಕಾರು ಮತ್ತು ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿ ಮೂವರು ಮೃತಪಟ್ಟಿರುವ ಘಟನೆ ಜೂ.12ರ ಸೋಮವಾರ ಮುಂಜಾನೆ ನಡೆದಿದೆ.

Advertisement

ಬೆಂಗಳೂರು ಮೂಲದ ಕುಟುಂಬವೊಂದು ಗೋವಾ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ಸು ಬರುವಾಗ ಸೋಮವಾರ ಬೆಳಗ್ಗೆ 7.30ಕ್ಕೆ ಈ ಅಪಘಾತ ಸಂಭವಿಸಿದೆ.

ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್ ನ ಜಾಕೀರ್ ಅಹಮ್ಮದ್(60), ತಬಸ್ಸುಮ್(28) ಹಾಗೂ ಮೂರು ವರ್ಷದ ಮಗು ಹಯಾತ್ ಫಾತಿಮಾ ಮೃತಪಟ್ಟಿದ್ದಾರೆ. ನಾಜಿಯಾ, ಇಮ್ರಾನ್ ಖಾನ್, ಶೋಯೇಬ್ ಅಹ್ಮದ್, ತಬ್ರೀಜ್ ಅಹ್ಮದ್ ಹಾಗೂ ಸಬಾ ಇವರುಗಳಿಗೆ ತೀವ್ರ ಗಾಯಾಳುಗಳಾಗಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಲಾರಿಯನ್ನು ಹಿಂದಿಕ್ಕುವ ವೇಳೆ ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದ ರಭಸಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next