Advertisement

ಒಮಿಕ್ರಾನ್ ಭೀತಿ: ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

03:16 PM Nov 28, 2021 | Team Udayavani |

ಚಿಕ್ಕೋಡಿ: ಕೊರೊನಾ ರೂಪಾಂತರ ಒಮಿಕ್ರಾನ್ ವೈರಸ್ ಹಿನ್ನೆಲೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿಯ ನಿಪ್ಪಾಣಿ ಚೆಕ್ ಪೋಸ್ಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Advertisement

ಮಹಾರಾಷ್ಟ್ರದಿಂದ ಕರ್ನಾಟಕ್ಕೆ ಆಗಮೀಸುವ ಪ್ರಯಾಣಿಕರನ್ನು ರಾಷ್ಟ್ರೀಯ ಹೆದ್ದಾರಿ ನಾಲ್ಕರ ನಿಪ್ಪಾಣಿ ತಾಲೂಕಿನ ಕೊಗನ್ನೋಳ್ಳಿ ಚೆಕ್ ಪೋಸ್ಟ್ ಬಳಿ ಪ್ರತಿಯೊಂದು ವಾಹನ ತಡೆದು ತಪಾಸಣೆ ನಡೆಸಲಾಗುತ್ತದೆ.

ಧಿಡೀರನೆ ಗಡಿಯಲ್ಲಿ ತಪಾಸಣೆ ನಡೆಸುವ  ಪೊಲೀಸರ ಮೇಲೆಯೇ ಮಹಾರಾಷ್ಟ್ರದ ಸಾರ್ವಜನಿಕರು ಮಾತಿನ ಚಕಮಕಿ ಮತ್ತು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ.

ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಹಿನ್ನಲೆ ವಾಹನ ತಡೆದ ಪೊಲೀಸರ ಮೇಲೆ ಹಲ್ಲೆಗೆ ಕೊಲ್ಲಾಪುರ ಮೂಲದ ಡಾ. ಸ್ವಾಮೀ ನಂದಿಮಠ ಎಂಬುವವರಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ತಪಾಸಣೆ ನಡೆಯುತ್ತಿದೆ ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ ಪೊಲೀಸ್ ಸಿಬ್ಬಂದಿಗೆ ಅವಾಚ್ಯವಾಗಿ ಬೈದಿರುವ ಹಿನ್ನಲ್ಲೆಯಲ್ಲಿ ಪ್ರಯಾಣಿಕನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next