Advertisement

ಆಮ್ತಿ ಸಮೀಪ ರಸ್ತೆಗೆ ಉರುಳಿದ ವಿದ್ಯುತ್ ಕಂಬ :ಕೆಲಕಾಲ ರಸ್ತೆ ಸಂಚಾರ ಸ್ಥಗಿತ

07:09 PM Sep 26, 2021 | Team Udayavani |

ಕೊಟ್ಟಿಗೆಹಾರ: ಕೊಟ್ಟಿಗೆಹಾರ ಬಾಳೆಹೊನ್ನೂರು ರಸ್ತೆಯ ಆಮ್ತಿ ಸಮೀಪ ವಿದ್ಯುತ್ ಕಂಬವೊಂದು ರಸ್ತೆಗೆ ಉರುಳಿ ಕೆಲಕಾಲ ಸಂಚಾರ ಸ್ಥಗಿತಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.

Advertisement

ಭಾನುವಾರ ಸಂಜೆ 4-30 ರಸುಮಾರಿಗೆ ವಿದ್ಯುತ್ ಕಂಬ ರಸ್ತೆಗೆ ಉರುಳಿದ್ದು ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರ ಸ್ಥಗಿತಗೊಳಿಸಿ ಸ್ಥಳಿಯರು ಮೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಇದನ್ನೂ ಓದಿ:ನಾಳೆಯ ‘ಭಾರತ್ ಬಂದ್‍’ಗೆ ಕಾಂಗ್ರೆಸ್ ಬೆಂಬಲ : ಡಿ.ಕೆ.ಶಿವಕುಮಾರ

ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಸಿಬ್ಬಂದಿಗಳು ರಸ್ತೆಗೆ ಉರುಳಿದ ವಿದ್ಯುತ್ ಕಂಬವನ್ನು ತೆರವುಗೊಳಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವುಗೊಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next