Advertisement

ಮೀನಿನ ಲಾರಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

04:14 PM Aug 27, 2021 | Team Udayavani |

ಕುಮಟಾ: ಮೀನು ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಾಲೂಕಿನ ದೀವಗಿ ಸಮೀಪದ ಹರಕಡೆಯಲ್ಲಿ ಶುಕ್ರವಾರ ನಡೆದಿದೆ.

Advertisement

ಬೈಕ್ ಸವಾರ ರಾಯಚೂರಿನ ಅವಿನಾಶ ಮುರುಳಿಕೃಷ್ಣ(21) ಹಾಗೂ ಕೊಪ್ಪಳದ ಸತ್ಯ ಪ್ರಮೋದ್ (21). ಮುರುಡೇಶ್ವರದಿಂದ ದಾಂಡೇಲಿಗೆ ಪ್ರವಾಸಕ್ಕೆಂದು ತೆರಳುತ್ತಿದ್ದ ವೇಳೆ ಎದುರಿಗೆ ಬಂದು ಮೀನಿನ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಇದನ್ನೂ ಓದಿ:ಸೆಪ್ಟೆಂಬರ್ 1 ರಿಂದ ದಿನಕ್ಕೆ 5 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ : ಬೊಮ್ಮಾಯಿ

ಅವಿನಾಶ ಮುರುಳಿಕೃಷ್ಣನ ತಲೆಗೆ ಬಲವಾದ ಪೆಟ್ಟು ಬಿದ್ದಿರುವುದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಇನ್ನೋರ್ವ ಸತ್ಯ ಪ್ರಮೋದ್ ನ  ಬೆನ್ನು, ತಲೆ ಹಾಗೂ ಕೈ ಕಾಲಿಗೆ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪಿ.ಎಸ್.ಐ ರವಿ ಗುಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಮಟಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next