ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಬೇವಿನ ಮರದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಮೃತ ರೈತನನ್ನು ಹಳ್ಳೂರ ಗ್ರಾಮದ ಮಲ್ಲಪ್ಪ ಶಿವಪ್ಪ ಯರಗಲ್ (ಡಮನಾಳ) (51) ಎಂದು ಗುರುತಿಸಲಾಗಿದೆ.
3 ಎಕರೆ ಜಮೀನಿನಲ್ಲಿ ಬೆಳೆದ ತೊಗರಿ ಹಾಳಾಗಿತ್ತು. ಢವಳಗಿ ಸಿಂಡಿಕೇಟ್ ಬ್ಯಾಂಕ್ ನಲ್ಲಿ 75 ಸಾವಿರ ರೂ.,ಖಾಸಗಿ ಫೈನಾನ್ಸ್ ನಲ್ಲಿ 40 ಸಾವಿರ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಬೆಳೆ ಕೈಕೊಟ್ಟ ಕಾರಣ ಸಾಲ ತೀರಿಸುವ ಬಗೆ ಹೇಗೆಂದು ಚಿಂತಿತನಾದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ:ಆಸ್ಟ್ರೇಲಿಯಾದಲ್ಲಿ ಭಾರೀ ಮಳೆ : ಮನೆಗೆ ನುಗ್ಗುತ್ತಿವೆ ಹಾವು-ಜೇಡಗಳು!
ಮೃತನಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಮುದ್ದೇಬಿಹಾಳ ಪಿಎಸ್ ಐ ಎಂ.ಬಿ. ಬಿರಾದಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುದ್ದೇಬಿಹಾಳ ಠಾಣೆ ಪೊಲೀಸರು, ರೈತ ಸಾಲಬಾಧೆಯಿಂದ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.