Advertisement

ಪ್ರೇಯಸಿಯ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ವ್ಯಕ್ತಿ

12:02 AM Feb 04, 2021 | Team Udayavani |

ಮೈಸೂರು: ಪ್ರೇಯಸಿಯ ಕತ್ತು ಬಿಗಿದು ಹತ್ಯೆ ಮಾಡಿದ ವಿವಾಹಿತ ವ್ಯಕ್ತಿಯೊಬ್ಬ  ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ.

Advertisement

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹೊಂಬಾಳೆ ಕೊಪ್ಪಲು ಗ್ರಾಮದ ಎಚ್.ಎಂ.ಲೋಕೇಶ್ (39) ಎಂಬಾತನೇ ಪ್ರೇಯಸಿ ನಾಗಮಂಗಲದ ಅಮೂಲ್ಯ ರನ್ನು ಹತ್ಯೆ ಮಾಡಿ,ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಘಟನೆ ನಡೆದಿದೆ.

ಈಗಾಗಲೇ  ಮದುವೆಯಾಗಿ, ಮಗಳನ್ನು ಹೊಂದಿದ್ದ ಪ್ರಥಮ ದರ್ಜೆ ಗುತ್ತಿಗೆದಾರನಾಗಿದ್ದ ಎಚ್.ಎಂ.ಲೋಕೇಶ್ ಮೈಸೂರಿನ ಕಾಲೇಜೊಂದರಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದ ಅಮೂಲ್ಯ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಇತ್ತಿಚೇಗೆ ಈಕೆ ಮದುವೆಯಾಗುವಂತೆ ಲೋಕೇಶ್ ನನ್ನು ಒತ್ತಾಯಿಸಿದ್ದಳು.

ಇದನ್ನೂ ಓದಿ:ದಲಿತ ಮಕ್ಕಳಿಗೆ ನಾಲ್ಕು ಸೈನಿಕ ಶಾಲೆ: ಗೋವಿಂದ ಕಾರಜೋಳ

ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ  ಇನ್ಫೋಸಿಸ್ ಬಳಿ ಇರುವ ಹೋಟೆಲ್ ಒಂದರಲ್ಲಿ ರೂಮ್ ಬುಕ್ ಮಾಡಿ ಅಲ್ಲಿಗೆ ಯುವತಿಯನ್ನು ಕರೆ ತಂದ ಲೋಕೇಶ್, ಆಕೆಯ ಕತ್ತನ್ನು ಹಗ್ಗದಿಂದ ಬಿಗಿದು ಹತ್ಯೆ ಮಾಡಿ, ತನ್ನ ಸ್ನೇಹಿತನೊಬ್ಬನಿಗೆ ಫೋನ್ ಮಾಡಿ ಘಟನೆಯನ್ನು ವಿವರಿಸಿ, ಯುವತಿಯ ದೇಹವನ್ನು ಇಲ್ಲಿಂದ ತೆಗೆದುಕೊಂಡು ಹೋಗಿ ಸುಟ್ಟು ಹಾಕಬೇಕು. ಇದಕ್ಕೆ ನೆರವಾಗುವಂತೆ ಕೇಳಿದ್ದಾನೆ. ಸ್ನೇಹಿತ ಇದು ಕಷ್ಟದ ಕೆಲಸ ಎಂದು ಹೇಳಿ ಹೋಟೆಲ್‌ನ ವಿಳಾಸ ತಿಳಿದುಕೊಂಡು, ಮತ್ತೊಬ್ಬ ಸ್ನೇಹಿತನ ಜತೆ ಹೋಟೆಲ್‌ಗೆ ಅವರ ರೂಮ್ ಬಾಗಿಲು ತೆಗೆಸಿದಾಗ ಪ್ರೇಯಸಿಯನ್ನು ಹತ್ಯೆ ಮಾಡಿದ ಲೋಕೇಶ್  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next