Advertisement

ಶಿಕಾರಿಪುರ: ಗ್ರಾಮದ ಜನರಿಗೆ ಭಯ ಹುಟ್ಟಿಸಿದ್ದ ಚಿರತೆ ಬೋನಿಗೆ…!

01:54 PM Mar 10, 2021 | Team Udayavani |

ಶಿಕಾರಿಪುರ : ಇಲ್ಲಿನ ಮದಗಹಾರನಹಳ್ಳಿಯ ಗ್ರಾಮಸ್ಥರಲ್ಲಿ ಭಯ ಮೂಡಿಸಿದ್ದ  3 ವರ್ಷದ ಗಂಡು ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

Advertisement

ಮದಗಹಾರನಹಳ್ಳಿಯ  ಗ್ರಾಮದ ಸುತ್ತಲೂ ಚಿರತೆ ಓಡಾಡುತ್ತಿದ್ದು, ಗ್ರಾಮಸ್ಥರು ಭಯಭೀತಗೊಂಡಿದ್ದರು. ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಮಾಹಿತಿಯ ಮೇರೆಗೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು  ಎಸಿಎಫ್ ಗೋಪ್ಯಾನಾಯ್ಕ್ ಮಾರ್ಗದರ್ಶನದಲ್ಲಿ ಚಿರತೆಯ ಚಲನವಲನಗಳನ್ನು ಗಮನಿಸಿ ನಾಯಿಯ ಸಮೇತ ಇರಿಸಲಾಗಿದ್ದ ಬೋನಿನಲ್ಲಿ ಚಿರತೆಯನ್ನು ಸೆರೆಹಿಡಿದಿದ್ದಾರೆ.

ಇದನ್ನೂ ಓದಿ:ಅಧಿವೇಶನದಲ್ಲಿ CM ಈ ರೀತಿ ಹೇಳಿರುವುದು ತಪ್ಪು: ಸಾಮಾಜಿಕ ಕಾರ್ಯಕರ್ತ ಮುಲಾಲಿ ಹೇಳಿದ್ದೇನು ?

ಇದರಿಂದ ಗ್ರಾಮದ ಜನರಿಗೆ ಆತಂಕ ದೂರವಾಗಿದೆ. ಅರಣ್ಯ ಇಲಾಖೆಯ ಕಾರ್ಯಕ್ಕೆ ಜನರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next