Advertisement

Bangalore: ಕಾರಿನಲ್ಲಿ ಲೈಂಗಿಕ ಕ್ರಿಯೆ; ಬುದ್ಧಿವಾದ ಹೇಳಿದ್ದಕ್ಕೆ ಹಲ್ಲೆ

10:34 AM Jan 25, 2024 | Team Udayavani |

ಬೆಂಗಳೂರು: ಹಾಡಹಾಗಲೇ ಕಾರಿನಲ್ಲಿ ಲೈಂಗಿಕ ಕ್ರಿಯೆ ನಡೆಸುತ್ತಿರುವುದನ್ನು ಪ್ರಶ್ನಿಸಿದ ಸಬ್‌ ಇನ್‌ ಸ್ಪೆಕ್ಟರ್‌ (ಪಿಎಸ್‌ಐ) ಮೇಲೆ ಕಾರು ಹತ್ತಿಸಲು ಯತ್ನಿಸಿದವನ ವಿರುದ್ಧ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಪಶ್ಚಿಮ ವಿಭಾಗದ ಸಶಸ್ತ್ರ ಮೀಸಲು ಪಡೆಯ ರಿಸರ್ವ್‌ ಪ್ರಶ್ನಿಸಿದ ಸಬ್‌ ಇನ್‌ ಸ್ಪೆಕ್ಟರ್‌ಮಹೇಶ್‌ ಎಂಬುವರು ಗಾಯಗೊಂಡವರು.

ಮಹೇಶ್‌ ಜ.20ರಂದು ಮಧ್ಯಾಹ್ನ ಊಟ ಮುಗಿಸಿಕೊಂಡು ವಾಕ್‌ ಮಾಡಲು ಜ್ಞಾನಭಾರತಿಯ ಉಪಕಾರ್‌ ಲೇಔಟ್‌ನ ಪಾರ್ಕ್‌ ಬಳಿ ಬರುವಾಗ ಎಡಬದಿಯಲ್ಲಿ ನಿಂತಿದ್ದ ಕಾರಿನಲ್ಲಿ ಯುವ ಜೋಡಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿತ್ತು. ಈ ರಸ್ತೆಯಲ್ಲಿ ನಿತ್ಯ ನೂರಾರು ಮಂದಿ ಪಾರ್ಕ್‌ ನಲ್ಲಿ ವಾಯುವಿಹಾರ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಈ ವಿಚಾರವಾಗಿ ತಿಳಿ ಹೇಳಲು ಮುಂದಾಗಿದ್ದರು. ಆಗ ಕಾರಿನಲ್ಲಿದ್ದ ಯುವಕ ಡ್ರೈವಿಂಗ್‌ ಸೀಟ್‌ಗೆ ಬಂದು ಏಕಾಏಕಿ ಕಾರು ಚಾಲನೆ ಮಾಡಿದ್ದಾನೆ.

ಕಾರಿನ ಮುಂಭಾಗದಲ್ಲಿ ನಿಂತಿದ್ದ ಮಹೇಶ್‌ ಏಕಾಏಕಿ ಕಾರು ಚಲಾಯಿಸಿದ್ದರಿಂದ ಆತಂಕಗೊಂಡು ಬಾನೆಟ್‌ ಮೇಲೆ ಹತ್ತಿದ್ದರು. ಕಾರು ನಿಲ್ಲಿಸುವಂತೆ ಸೂಚಿಸಿದರೂ ಕೇಳದ ಚಾಲಕ, ವೇಗವಾಗಿ ರಿವರ್ಸ್‌ ಗೇರ್‌ ಹಾಕಿ ಸಡನ್‌ ಆಗಿ ಬ್ರೇಕ್‌ ಹಾಕಿದ್ದರಿಂದ ಮಹೇಶ್‌ ಕೆಳಗೆ ಬಿದ್ದಿದ್ದರು. ತಲೆಗೆ ಮತ್ತು ದೇಹದ ಇತರೆ ಭಾಗಗಳಿಗೆ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಮಹೇಶ್‌ ಅವರನ್ನು ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಿಸಿಕ್ಯಾಮರಾದಲ್ಲಿ ಸೆರೆಯಾದ ಕಾರಿನ ನೋಂದಣಿ ಸಂಖ್ಯೆ ಆಧಾರದ ಮೇರೆಗೆ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next