Advertisement
ಪ್ರತಿ ಮಾಸಿಕ ಸಭೆಯಲ್ಲಿ ಜಿಲ್ಲಾಧಿಕಾರಿಗಳು ತೆರಿಗೆ ವಾಣಿಜ್ಯ ಸಂಕೀರ್ಣಗಳ ಬಾಡಿಗೆ ವಸೂಲಿ ಮಾಡಲು ಸೂಚನೆ ನೀಡಿದರೂ ಪ್ರಯೋಜನವಾಗುತ್ತಿಲ್ಲ. ನಗರದಲ್ಲಿ 27 ಸಾವಿರ ಆಸ್ತಿಗಳು ನಗರಸಭೆಯಲ್ಲಿದಾಖಲಾಗಿದ್ದು, ವಾರ್ಷಿಕ 2 ಕೋಟಿ ರೂ. ತೆರಿಗೆ, ವಾಣಿಜ್ಯ ಸಂಕೀರ್ಣಗಳ ಬಾಡಿಗೆ, ಶಾಪಿಂಗ್ ಕಾಂಪ್ಲೆಕ್ಸ್ ವಾಣಿಜ್ಯ ತೆರಿಗೆ ಮತ್ತು ಜಾಹೀರಾತು ಫಲಕಗಳಿಂದ ಬರುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಟ್ಟಡ ಮಾಲೀಕರು ತೆರಿಗೆ ಪಾವತಿಸದೇ ನಿರ್ಲಕ್ಷ್ಯ ತೋರುತ್ತಿರುವುದರಿಂದ ನಗರಸಭೆ ಹಣಕಾಸಿನ ಸ್ಥಿತಿ ಶೋಚನೀಯವಾಗಿದೆ.
Related Articles
Advertisement
ನಗರಸಭೆಯಲ್ಲಿ ಸಾರ್ವಜನಿಕರು ಫಾರಂ-03 ಮತ್ತು ಮುಟೇಶನ್ ಗಾಗಿ ಅರ್ಜಿ ಸಲ್ಲಿಸಿ ತಿಂಗಳುಗಟ್ಟಲೇ ಕಾಯುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾದ ಸಮಯದಲ್ಲಿ ಕೆಲಸ ಕಾರ್ಯ ಮಾಡಿದರೆ ತೆರಿಗೆ ಸೇರಿ ನಗರಸಭೆಯ ವಿವಿಧ ಶುಲ್ಕಗಳ ಆದಾಯ ಹೆಚ್ಚಳವಾಗಲಿದೆ. ಇದರಿಂದ ನಗರಸಭೆ ವಿವಿಧ ಅಭಿವೃದ್ಧಿ ಕಾರ್ಯಗಳು ನಿರಾತಂಕವಾಗಿ ನಡೆಯಲು ಸಾಧ್ಯವಾಗುತ್ತದೆ.
ನಗರಸಭೆ ವ್ಯಾಪ್ತಿಯ 35 ವಾರ್ಡ್ಗಳಲ್ಲಿರುವ ನಗರಸಭೆಯ ವಾಣಿಜ್ಯ ಮಳಿಗೆಗಳ ಬಾಡಿಗೆ, ನಳದ ತೆರಿಗೆ, ಆಸ್ತಿ ತೆರಿಗೆ ಹೀಗೆ ತೆರಿಗೆ ಬಾಕಿ ಉಳಿಸಿಕೊಂಡವರ ಸಂಖ್ಯೆ ಹೆಚ್ಚಾಗಿದ್ದು, ನಗರಸಭೆಯಲ್ಲಿ ತೆರಿಗೆ ಸಂಗ್ರಹ ಕಡಿಮೆಯಾಗಿದೆ. ರೈಸ್ ಮಿಲ್, ಕಲ್ಯಾಣ ಮಂಟಪ, ಟ್ರೇಡ್ ಪರವಾನಗಿ, ಶಾಪಿಂಗ್ ಕಾಂಪ್ಲೆಕ್ಸ್, ಸಿನಿಮಾ ಮಂದಿರ, ಖಾಸಗಿ ಶಾಲಾ-ಕಾಲೇಜುಗಳ ಜಾಗದ ತೆರಿಗೆ ಬಾಕಿ ಗಣನೀಯವಾಗಿ ಹೆಚ್ಚಾಗಿದೆ. ಕೆಲ ಶ್ರೀಮಂತರು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆ ತೆರಿಗೆ, ಮಳಿಗೆ ಬಾಡಿಗೆ ಸೇರಿ ನಗರಸಭೆಗೆ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿ ಮಾಡಿ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಕೋವಿಡ್ ಮಹಾಮಾರಿಯ ಮಧ್ಯೆದಲ್ಲೂ ಚೆನ್ನಾಗಿ ಆದಾಯವಿರುವ ವಾಣಿಜ್ಯ ಸಂಕೀರ್ಣಗಳಿಂದ ತೆರಿಗೆ ವಸೂಲಿ ಮಾಡಲಾಗುತ್ತದೆ. ನಗರದಲ್ಲಿ ವಾಣಿಜ್ಯ ವಹಿವಾಟು ಮಾಡುವ ಪ್ರತಿಯೊಬ್ಬರು ಟ್ರೇಡ್ ಲೈಸೆನ್ಸ್ ಕಡ್ಡಾಯವಾಗಿ ಪಡೆಯಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. –ಅರವಿಂದ ಜಮಖಂಡಿ, ಪೌರಾಯುಕ್ತರು.
–ಕೆ. ನಿಂಗಜ್ಜ