Advertisement
ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮನಬಂದಂತೆ ವ್ಯಂಗ್ಯ ಚಿತ್ರಣ , ಮೀಮ್ ಮಾಡುವುದು, ಬರಹಗಳನ್ನು ಹಾಕಿದ್ದಾರೆ. ಖೈದಿಗಳ ದಿನಗೂಲಿಯನ್ನ 525 ರೂಗಳಿಗೆ ಏರಿಸಿದ್ದು ಬೇರೆ ಉದ್ಯೋಗಗಳಿಗಿಂತ ಜೈಲುವಾಸವೇ ಲಾಭದಾಯಕ ಎಂಬಂತೆ ಹಲವರು ಗೇಲಿ ಮಾಡಿ ಹರಿಬಿಟ್ಟಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟೀಕರಣ ನೀಡಿದ್ದಾರೆ.
Related Articles
Advertisement
ಸೆರೆವಾಸ ಮುಗಿಸಿ ಒಬ್ಬ ಪ್ರಜ್ಞಾವಂತ ನಾಗರೀಕನಾಗಿ ಬದುಕಬೇಕಾದ ಒಬ್ಬ ವ್ಯಕ್ತಿ ಬರಿಗೈಯಲ್ಲಿ ಮನೆಗೆ ಹೋದರೆ ಆತನ ಜೀವನ ಕಷ್ಟ. ತನ್ನ ಜೀವನಕ್ಕೆ ಏನೂ ಆಧಾರ, ಆದಾಯ ಇಲ್ಲದೇ ಸಮಾಜದ ದೃಷ್ಠಿಯಲ್ಲಿ ಅಸ್ಪೃಶ್ಯರಂತಾಗುವ ಆತ ಮತ್ತೆ ತನ್ನ ಜೀವನ ನಡೆಸಲು ಕೆಟ್ಟ ದಾರಿಯನ್ನೇ ಆರಿಸಿಕೊಳ್ಳುವ ಸಂಭವ ಇರುತ್ತದೆ. ಖೈದಿಗಳ ಕೂಲಿ ಏರಿಸಿದರೂ ಜೈಲಿನಿಂದ ಹೊರಬಂದ ನಂತರವೇ ಅವರಿಗೆ ಹಣ ನೀಡಲಾಗುತ್ತದೆ. ತಮ್ಮ ಕುಟುಂಬದ ನಿರ್ವಹಣೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ , ಸ್ವಂತ ಉದ್ಯೋಗಕ್ಕೆ ಇದು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಈ ಎಲ್ಲಾ ಮಾನವೀಯತೆಯ ದೃಷ್ಠಿಯಿಂದ ಖೈದಿಗಳಿಂದ ಬರುತ್ತಿರುವ ಆದಾಯದಿಂದಲೇ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದ್ದು ಇದರ ಸಾಧಕ ಬಾಧಕಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಖೈದಿಗಳ ಕೂಲಿ ಹೆಚ್ಚಿಸುವ ಆದೇಶ ಇನ್ನೂ ಜಾರಿಯಾಗಿಲ್ಲ ಆದರೆ ಹೀಗೊಂದು ಸದುದ್ದೇಶದ ಆಲೋಚನೆ ಮಾಡಲಾಗಿದೆಯಷ್ಟೆ.ಆದರೆ ಹಲವರು ಊಹಾಪೋಹಗಳನ್ನು ನಂಬಿ ಖೈದಿಗಳ ಸಂಬಳ ಶಿಕ್ಷಕರ ವೃತ್ತಿಗಿಂತಲೂ ಲೇಸು ಎಂದು ಎಲ್ಲೆಡೆ ಸುದ್ದಿ ಹರಡುತ್ತಿರುವುದು ತಿಳಿದುಬಂದಿದ್ದು ಈ ಬಗ್ಗೆ ಮೇಲಿನ ಸ್ಪಷ್ಟೀಕರಣ ನೀಡಬಯಸುತ್ತೇನೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.