Advertisement

ಹಣಕಾಸು ಆಯೋಗದ ಅನುದಾನದಲ್ಲೂ ಹೆಚ್ಚಳ

06:52 AM Jun 26, 2019 | Lakshmi GovindaRaj |

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಸ್ವಂತ ಅನುದಾನದಲ್ಲಿ ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳಿಗೆ ಶೇ.5ರಷ್ಟು ಅನುದಾನ ಮೀಸಲಿಡಬೇಕೆಂದು ಇತ್ತೀಚೆಗಷ್ಟೇ ಹೇಳಿದ್ದ ಸರ್ಕಾರ, ಈಗ ಕೇಂದ್ರ ಹಾಗೂ ರಾಜ್ಯ ಹಣಕಾಸು ಆಯೋಗ ಮತ್ತು ಜಿಲ್ಲಾ, ತಾಲೂಕು ಹಾಗೂ ಗ್ರಾಪಂಗಳಿಗೆ ಬಿಡುಗಡೆಯಾಗುವ ವಿವಿಧ ಯೋಜನೆಗಳ ಅನುದಾನದಲ್ಲೂ ಶೇ.5ರಷ್ಟು ಹಣ ಮೀಸಲಿಡಬೇಕೆಂದು ಹೇಳಿದೆ. ವಿಕಲಚೇತನರ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಶೇ.3 ಅನುದಾನ ಮೀಸಲಿಡಲಾಗುತ್ತಿತ್ತು.

Advertisement

ಆದರೆ, 2018-19ನೇ ಸಾಲಿನ ಬಜೆಟ್‌ನಲ್ಲಿ ಅನುದಾನವನ್ನು ಶೇ.5ಕ್ಕೆ ಹೆಚ್ಚಿಸಲಾಗಿದೆ. ಅದರಂತೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಕೇಂದ್ರ ಮತ್ತು ರಾಜ್ಯ ಹಣಕಾಸು ಆಯೋಗದ ಅನುದಾನ ಸೇರಿ ಜಿಲ್ಲಾ, ತಾಲೂಕು ಮತ್ತು ಗ್ರಾಪಂಗಳಿಗೆ ಬಿಡುಗಡೆಯಾಗುವ ಅನುದಾದನಲ್ಲಿ ವಿಕಲಚೇತನ ಅಭಿವೃದ್ಧಿ ಯೋಜನೆಗೆ ಶೇ.5ರಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕೆಂದು ಇಲಾಖೆ ಸುತ್ತೋಲೆ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next