Advertisement

ಒಮಿಕ್ರಾನ್‌ ಹೆಚ್ಚಳ; ಅಧಿಕಾರಿಗಳೊಂದಿಗೆ ಶಾಸಕರ ಸಭೆ

08:38 PM Jan 04, 2022 | Team Udayavani |

ಚಿಕ್ಕೋಡಿ: ಒಮಿಕ್ರಾನ್‌ ಕೇಸ್‌ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಅವರು ತಹಶೀಲ್ದಾರ್‌ ಕಚೇರಿಯಲ್ಲಿ ಅಧಿ  ಕಾರಿಗಳೊಂದಿಗೆ ಸಭೆ ನಡೆಸಿದರು. ಕೋವಿಡ್‌ ಮೊದಲನೇ ಹಾಗೂ ಎರಡನೇ ಅಲೆಯಲ್ಲಿ ಆದಂತಹ ಲೋಪದೋಷಗಳನ್ನು ಗಮನದಲ್ಲಿ ಟ್ಟುಕೊಂಡು 3ನೇ ಅಲೆಯನ್ನು ಸಮರ್ಪಕವಾಗಿ ಎದುರಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿ ಕಾರಿಗಳಿಗೆ ಸೂಚಿಸಿದರು.

Advertisement

ತಾಲೂಕಿನಾದ್ಯಂತ ಅಗತ್ಯವಿರುವ ಆರೋಗ್ಯ ಅ ಧಿಕಾರಿಗಳ ನೇಮಕಾತಿ ಪ್ರಕ್ರಿಯೆ, 100 ಜಂಬೋ ಆಕ್ಸಿಜನ್‌ ಸಿಲಿಂಡರ್‌, ಎರಡು ಆಂಬ್ಯುಲೆನ್ಸ್‌ ಗಳ ಪೂರೈಕೆಗಾಗಿ ಆರೋಗ್ಯ ಸಚಿವರಾದ ಕೆ.ಸುಧಾಕರ ಅವರೊಡನೆ ಚರ್ಚಿಸುತ್ತೇನೆಂದು ತಿಳಿಸಿದರು. ಜನಪರ ಸೇವೆಗೆ ಶ್ಲಾಘನೆ: ಈಗಾಗಲೇ ಮಾಜಿ ಸಚಿವರಾದ ಪ್ರಕಾಶ ಹುಕ್ಕೇರಿ ಅವರು ಕೋವಿಡ್‌-19ರ ಒಂದನೇ ಮತ್ತು ಎರಡನೇ ಅಲೆ ಬಂದಾಗ ಸಾಕಷ್ಟು ಜನಪರ ಸೇವೆಗಳನ್ನು ಮಾಡಿದ್ದಾರೆ.

ಕ್ಷೇತ್ರದ ಜನರಿಗೆ ಮನೆ ಮನೆಗೆ ವಾಹನ ಕಳುಹಿಸಿ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಅನುಕೂಲ ಮಾಡಿದ್ದಾರೆ. ಸರಕಾರಿ ಆಸ್ಪತ್ರೆಗಳಿಗೆ ವೆಂಟಿಲೇಟರ್‌ ಬೆಡ್‌ಗಳಿಗೆ ಅನುಕೂಲವಾಗಲು 4 ಜನರೇಟರ್‌ ಗಳನ್ನು ನೀಡಿದ್ದಾರೆ. ಸ್ವಂತ ವೆಚ್ಚದಲ್ಲಿ ವೈದ್ಯರ ಹಾಗೂ ಸ್ಟಾಫರ್ಗಳನ್ನು ನೇಮಿಸಿರುವ ಕಾರ್ಯ ಶ್ಲಾಘನೀಯ ಎಂದು ಅಧಿಕಾರಿಗಳು ಶ್ಲಾಘಿಸಿದರು. ಎಸಿ ಶಶಿಧರ ಬಗಲಿ, ತಹಶೀಲ್ದಾರ್‌ ದೇಶಪಾಂಡೆ, ಆರೋಗ್ಯ ಇಲಾಖೆ ಅಧಿ  ಕಾರಿಗಳಾದ ಎಸ್‌.ಎಸ್‌. ಗಡೆದ, ವಿಠಲ ಶಿಂಧೆ ಮುಂತಾದವರು ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next