Advertisement

ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಹೆಚ್ಚಳ

08:05 AM Aug 27, 2017 | Team Udayavani |

ಬೆಂಗಳೂರು: ರಾಜ್ಯದಲ್ಲಿ ಶಿಶು ಮರಣ ಹೆಚ್ಚಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರವು ಗರ್ಭಿಣಿ, ಬಾಣಂತಿಯರ ಆರೋಗ್ಯ ಪಾಲನೆಗೆ ಹೆಚ್ಚು ಒತ್ತು ನೀಡಿದ್ದು, ಇದಕ್ಕೆ ನೆರವಾಗುವ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಿದೆ.

Advertisement

ಗರ್ಭಿಣಿಯರ ಆರೈಕೆಗೆ ನೀಡುವ ಪ್ರೋತ್ಸಾಹ ಧನವನ್ನು 600 ರೂ.ನಿಂದ 1,050 ರೂ.ಗೆ ಏರಿಕೆ ಮಾಡಿದೆ. ಹಾಗೆಯೇ ಅಪಾಯ ಸ್ಥಿತಿಯಲ್ಲಿರುವ ಗರ್ಭಿಣಿಯರನ್ನು ಗುರುತಿಸಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ಆಶಾ ಕಾರ್ಯಕರ್ತೆಯರಿಗೆ 500 ರೂ. ಪ್ರೋತ್ಸಾಹ ಧನ ನೀಡಲಿದೆ. 12 ವಾರಗಳೊಳಗೆ ಗರ್ಭಿಣಿ ಎಂ.ಸಿ.ಟಿ.ಎಸ್‌. ತಂತ್ರಾಂಶದಲ್ಲಿ ನೋಂದಣಿಯಾದರೆ ಗರ್ಭಿಣಿಗೆ ಗುಣಮಟ್ಟದ ಆರೈಕೆ ನೀಡಿ ತಾಯಿ ಮರಣ ಮತ್ತು ಶಿಶು ಮರಣ ಕಡಿಮೆಯಾಗಲಿದೆ. ಆ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನವನ್ನು 75 ರೂ.ನಿಂದ 300 ರೂ.ಗೆ ಏರಿಕೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next