Advertisement

ಕಾನ್‌ಸ್ಟೆಬಲ್ ಗಳ  ಭತ್ತೆ ಹೆಚ್ಚಳ

01:44 AM Jun 20, 2019 | Team Udayavani |
ಬೆಂಗಳೂರು: ಕಳೆದ ಬಾರಿಯ ಬಜೆಟ್ (2019-20ರ ಅಯವ್ಯಯ)ನಲ್ಲಿ ಘೋಷಿಸಿದಂತೆ ರಾಜ್ಯ ಪೊಲೀಸ್‌ ಇಲಾಖೆಯಲ್ಲಿರುವ ಕಾನ್‌ಸ್ಟೆಬಲ್ ಮತ್ತು ಹೆಡ್‌ಕಾನ್‌ಸ್ಟೆಬಲ್ ಗಳ  ಮಾಸಿಕ ಕಷ್ಟ ಪರಿಹಾರ ಭತ್ತೆಯನ್ನು 1 ಸಾವಿರ ರೂ.ಗಳಿಂದ 2 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಆರನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ಪೊಲೀಸ್‌ ಇಲಾಖೆಯ ಕಾನ್‌ಸ್ಟೆಬಲ್, ಹೆಡ್‌ಕಾನ್‌ಸ್ಟೆಬಲ್ಗಳಿಗೆ 2019ರ ಜ.19ರಂದು ಒಂದು ಸಾವಿರ ರೂ. ಕಷ್ಟ ಪರಿಹಾರ ಭತ್ತೆಯನ್ನು ಮಂಜೂರು ಮಾಡಲಾಗಿತ್ತು. ಅದರೊಂದಿಗೆ 2019-20ನೇ ಸಾಲಿನ ಬಜೆಟ್‌ನಲ್ಲಿ ಕಾನ್‌ಸ್ಟೆಬಲ್ಗಳಿಗೆ ನೀಡಲಾಗುವ ಕಷ್ಟ ಪರಿಹಾರ ಭತ್ತೆಯನ್ನು ಒಂದು ಸಾವಿರದಿಂದ ಎರಡು ಸಾವಿರ ರೂ.ಗೆ ಹೆಚ್ಚಳ ಮಾಡುವುದಾಗಿ ಉಲ್ಲೇಖೀಸಲಾಗಿತ್ತು. ಜು.1ರಿಂದ ಅನ್ವಯವಾಗುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next