Advertisement

ಬಸವಸಾಗರಕ್ಕೆ ಒಳಹರಿವು ಹೆಚ್ಚಳ

05:12 PM Sep 11, 2021 | Team Udayavani |

ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ಪುನಃ ಒಳಹರಿವು ಆರಂಭವಾಗಿದ್ದರಿಂದ ಗುರುವಾರ ಜಲಾಶಯದ ಕ್ರಸ್ಟ್‌ ಗೇಟ್‌ಗಳ ಮೂಲಕ ಹಾಗೂ ಖಾಸಗಿ ಜಲವಿದ್ಯುತ್‌ ಸ್ಥಾವರದ ಮೂಲಕ ಒಟ್ಟು 32 ಸಾವಿರ ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.

Advertisement

ಕಳೆದ ಕೆಲ ದಿನಗಬಸವಸಾಗರಕ್ಕೆ ಒಳಹರಿವು ಹೆಚ್ಚಳ ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ಪುನಃ ಒಳಹರಿವು ಆರಂಭವಾಗಿದ್ದರಿಂದ ಗುರುವಾರ ಜಲಾಶಯದ ಕ್ರಸ್ಟ್‌ ಗೇಟ್‌ಗಳ ಮೂಲಕ ಹಾಗೂ ಖಾಸಗಿ ಜಲವಿದ್ಯುತ್‌ ಸ್ಥಾವರದ ಮೂಲಕ ಒಟ್ಟು 32 ಸಾವಿರ ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.

ಕಳೆದ ಕೆಲ ದಿನಗಳಿಂದ ಜಲಾಶಯಕ್ಕೆ ಒಳಹರಿವು ಸ್ಥಗಿತಗೊಂಡಿದ್ದರಿಂದ ನದಿಗೆ ನೀರು ಹರಿಸುವದನ್ನು ಬಂದ್‌ ಮಾಡಲಾಗಿತ್ತು, ಈಚೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿದ ನಿರಂತರ ಮಳೆಯಿಂದ ಆಲಮಟ್ಟಿ ಅಣೆಕಟ್ಟಿಗೆ ಒಳಹರಿವು ಹೆಚ್ಚಾಗಿದ್ದರಿಂದ ಬಸವಸಾಗರಕ್ಕೆ 25 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಹರಿಬಿಡಲಾಗುತ್ತಿದೆ. ಏಕಾಏಕಿ ಒಳಹರಿವು ಹೆಚ್ಚಾಗಿದ್ದರಿಂದ ಬಸವಸಾಗರ ಜಲಾಶಯದಲ್ಲಿ ನೀರು ಸಂಗ್ರಹ ಮಟ್ಟದಲ್ಲಿ ಏರಿಕೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಲಾಶಯದ ಕ್ರಸ್ಟ್‌ ಗೇಟ್‌ಗಳನ್ನು ತೆರೆದು 26 ಸಾವಿರ ಕ್ಯೂಸೆಕ್‌ ಹಾಗೂ ಮುರಡೇಶ್ವರ ಖಾಸಗಿ ಜಲವಿದ್ಯುತ್‌ ಸ್ಥಾವರದ ಮೂಲಕ 6 ಸಾವಿರ ಕ್ಯೂಸೆಕ್‌ ಸೇರಿ ಒಟ್ಟು 32 ಸಾವಿರ ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಹೀಗಾಗಿ ನದಿ ತೀರದ ಜನ ನದಿಗೆ ಇಳಿಯದಂತೆ ಎಚ್ಚರ ವಹಿಸುವಂತೆ ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ಬಸವಸಾಗರ ಜಲಾಶಯದಲ್ಲಿ 492.13 ಮೀಟರ್‌ಗೆ ನೀರು ಇದ್ದು,32.74 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಗೊಂಡು ಶೇ.98.31 ಪ್ರತಿಶತದಷ್ಟು ಜಲಾಶಯ ಭರ್ತಿಯಾಗಿದೆ. ಮುಂಗಾರು ಹಂಗಾಮಿಗೆ ನೀರಾವರಿ ಮುಖ್ಯ ಕಾಲುವೆಗಳಿಗೆ 4500 ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ.ಳಿಂದ ಜಲಾಶಯಕ್ಕೆ ಒಳಹರಿವು ಸ್ಥಗಿತಗೊಂಡಿದ್ದರಿಂದ ನದಿಗೆ ನೀರು ಹರಿಸುವದನ್ನು ಬಂದ್‌ ಮಾಡಲಾಗಿತ್ತು, ಈಚೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿದ ನಿರಂತರ ಮಳೆಯಿಂದ ಆಲಮಟ್ಟಿ ಅಣೆಕಟ್ಟಿಗೆ ಒಳಹರಿವು ಹೆಚ್ಚಾಗಿದ್ದರಿಂದ ಬಸವಸಾಗರಕ್ಕೆ 25 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಹರಿಬಿಡಲಾಗುತ್ತಿದೆ.

ಏಕಾಏಕಿ ಒಳಹರಿವು ಹೆಚ್ಚಾಗಿದ್ದರಿಂದ ಬಸವಸಾಗರ ಜಲಾಶಯದಲ್ಲಿ ನೀರು ಸಂಗ್ರಹ ಮಟ್ಟದಲ್ಲಿ ಏರಿಕೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಲಾಶಯದ ಕ್ರಸ್ಟ್‌ ಗೇಟ್‌ಗಳನ್ನು ತೆರೆದು 26 ಸಾವಿರ ಕ್ಯೂಸೆಕ್‌ ಹಾಗೂ ಮುರಡೇಶ್ವರ ಖಾಸಗಿ ಜಲವಿದ್ಯುತ್‌ ಸ್ಥಾವರದ ಮೂಲಕ 6 ಸಾವಿರ ಕ್ಯೂಸೆಕ್‌ ಸೇರಿ ಒಟ್ಟು 32 ಸಾವಿರ ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.

Advertisement

ಹೀಗಾಗಿ ನದಿ ತೀರದ ಜನ ನದಿಗೆ ಇಳಿಯದಂತೆ ಎಚ್ಚರ ವಹಿಸುವಂತೆ ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಬಸವಸಾಗರ ಜಲಾಶಯದಲ್ಲಿ 492.13 ಮೀಟರ್‌ಗೆ ನೀರು ಇದ್ದು,32.74 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಗೊಂಡು ಶೇ.98.31 ಪ್ರತಿಶತದಷ್ಟು ಜಲಾಶಯ ಭರ್ತಿಯಾಗಿದೆ. ಮುಂಗಾರು ಹಂಗಾಮಿಗೆ ನೀರಾವರಿ ಮುಖ್ಯ ಕಾಲುವೆಗಳಿಗೆ 4500 ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next