Advertisement

ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಿಸಿ; ಡಾ|ರಾಗಪ್ರಿಯಾ

06:15 PM Feb 17, 2021 | Team Udayavani |

ಯಾದಗಿರಿ: ಆರೋಗ್ಯ ಇಲಾಖೆ ಸಿಬ್ಬಂದಿ, ಕಂದಾಯ, ಪೊಲೀಸ್‌, ಪಂಚಾಯತ್‌ ರಾಜ್‌ ಇಲಾಖೆಗಳು ಸೇರಿದಂತೆ ಇತರ ಇಲಾಖೆಯ ಸಿಬ್ಬಂದಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎರಡನೇ ಡೋಸ್‌ (ಲಸಿಕೆ) ಪಡೆಯುವವರ ಸಂಖ್ಯೆ ಹೆಚ್ಚಿಸಲು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಸೂಚನೆ ನೀಡಿದರು.

Advertisement

ಎರಡನೇ ಡೋಸ್‌ ವಿತರಣೆಗೆ ಕುರಿತು ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್‌ -19 ಲಸಿಕೆಗೆ ಸಂಬಂಧಿ ಸಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು ಬಹಳ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಲಸಿಕಾ ಕೇಂದ್ರಗಳಲ್ಲಿ ಜನಸಂದಣಿ ಉಂಟಾಗದಂತೆ ಲಸಿಕಾ ಕೇಂದ್ರಗಳಲ್ಲಿ ಕೋವಿಡ್‌ ಲಸಿಕೆ ವಿತರಣೆಗೆ ವ್ಯವಸ್ಥಿತ ಯೋಜನೆ ರೂಪಿಸಿಕೊಳ್ಳಬೇಕು ಎಂದರು.

ಲಸಿಕೆ ಸಂಗ್ರಹಿಸಿಡಲು ಜಿಲ್ಲೆಯಲ್ಲಿ ದಾಸ್ತಾನು ಕೇಂದ್ರ ತೆರೆಯಲಾಗಿದ್ದು, ಲಸಿಕೆ ಪೂರೈಕೆ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಉಂಟಾಗಬಾರದು. ವ್ಯವಸ್ಥಿತವಾಗಿ ಲಸಿಕೆ ಪೂರೈಕೆ ಮಾಡಬೇಕು ಎಂದು ಅಧಿ ಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಇಂದುಮತಿ ಕಾಮಶೆಟ್ಟಿ ಮಾತನಾಡಿ, ಎರಡನೇ ಡೋಸ್‌ ನೀಡಲು 15 ಸೆಷನ್‌ ಗಳನ್ನು ಮಾಡಲಾಗಿದ್ದು, ಒಂದು ಕೇಂದ್ರದಲ್ಲಿ ದಿನಕ್ಕೆ 150 ಜನ ಲಸಿಕೆ ಪಡೆಯಬಹುದು. ಜಿಲ್ಲೆಯ 53 ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೋವಿಡ್‌ ಲಸಿಕೆ ಪಡೆದವರಿಗೆ ವೇಟಿಂಗ್‌ ಹಾಲ್‌, ಲಸಿಕಾ ಕೊಠಡಿ, ನಿಗಾವಣೆ ಕೊಠಡಿ ಸೇರಿದಂತೆ ಲಸಿಕೆಗಾಗಿ ಮೂರು ಕೊಠಡಿಗಳು ಬೇಕಾಗುತ್ತವೆ. ಈ ನಿಟ್ಟಿನಲ್ಲಿ ಕಿರಿಯ ಆರೋಗ್ಯ ಸಹಾಯಕಿಯರಿಗೆ, ಆಶಾ ಕಾರ್ಯಕರ್ತೆಯರಿಗೆ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಕೋವಿಡ್‌ ಲಸಿಕೆ ದಾಸ್ತಾನ ಕೇಂದ್ರದಲ್ಲಿ ಸುಮಾರು 24 ಲಕ್ಷ ಡೋಸ್‌ ಸಂಗ್ರಹಿಸುವ ಅವಕಾಶವಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ವಿಶ್ವ ಆರೋಗ್ಯ ಸಂಸ್ಥೆಯ ಎನ್‌ಪಿಎಸ್‌ ಅ ಧಿಕಾರಿ ಅನಿಲ ಕುಮಾರ್‌ ತಾಳಿಕೋಟಿ ಸೇರಿದಂತೆ ಹಲವರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next