Advertisement

ದುರಾಡಳಿತದಿಂದ ನಿರುದ್ಯೋಗ ಹೆಚ್ಚಳ; ಈಶ್ವರ ಖಂಡ್ರೆ

06:47 PM Mar 12, 2021 | Team Udayavani |

ಯಾದಗಿರಿ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳ ದುರಾಡಳಿತದಿಂದ ನಿರುದ್ಯೋಗ ಹೆಚ್ಚಳವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರಲ್ಲಿ ಶೇ.2.2 ಮಾತ್ರ ಇದ್ದ ನಿರುದ್ಯೋಗ ಸಮಸ್ಯೆ ಇಂದು ಶೇ. 7ರಿಂದ 8ಕ್ಕೆ ಹೆಚ್ಚಳವಾಗಿದೆ. ಇದು ಜನರಿಗೆ ಮಾಡಿದ ದ್ರೋಹ. ಅಚ್ಚೇ ದಿನ್‌ ಯಾರಿಗೆ ಬಂದಿದೆ? ಎಂದು ಟೀಕಿಸಿದರು. ಸಾರ್ವಜನಿಕ ವಲಯದ ಉದ್ಯಮಗಳನ್ನು
ಕಂಪನಿಗಳ ಕೈಗೆ ಒಪ್ಪಿಸುತ್ತಿರುವ ದಪ್ಪ ಚರ್ಮದ ಸರ್ಕಾರದ ನೀತಿಯಿಂದ ಆರ್ಥಿಕತೆ ಕುಸಿದಿದೆ ಎಂದರು.

Advertisement

ಚುನಾವಣೆ ವೇಳೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಕೇವಲ ರಾಷ್ಟ್ರೀಯತೆ, ರಾಷ್ಟ್ರ ಪ್ರೇಮದ ಹೆಸರಿನಲ್ಲಿ ನಂಬಿಸಿ ದ್ರೋಹ ಮಾಡುತ್ತಿದೆ. ದೇಶದ
ಮುಗª ಜನತೆಯನ್ನು ಒಂದು ಅಲ್ಲ ಎರಡು ಬಾರಿ ಮೋಸ ಮಾಡಬಹುದು. ಮೂರನೇ ಬಾರಿಗೆ ಮೋಸ ಸಾಧ್ಯವಿಲ್ಲ. ಬಿಜೆಪಿಯನ್ನು ಬುಡ ಸಮೇತ ಜನರು ಕಿತ್ತು ಹಾಕುತ್ತಾರೆ ಎಂದರು. ಬಿಜೆಪಿ ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದು, ಶಾಸಕರ ಧ್ವನಿ ಹತ್ತಿಕ್ಕಲು ಸುಳ್ಳು ಕೇಸ್‌ಗಳನ್ನು ಹಾಕುತ್ತಿದೆ ಎಂದು ದೂರಿದರು. ಯಾದಗಿರಿಯಲ್ಲಿಯೂ ಆಡಳಿತ ಪಕ್ಷದ ದೂರುಗಳನ್ನು ಅಷ್ಟೇ ಪಡೆದು ಕಿರುಕುಳ ನೀಡಲಾಗುತ್ತಿದೆ ಎಂಬ ದೂರುಗಳು ಬಂದಿದೆ. ಅಧಿಕಾರಿಗಳು ನ್ಯಾಯ ಸಮ್ಮತ, ಸಂವಿಧಾನಾತ್ಮಕವಾಗಿ ಕಾರ್ಯ ಮಾಡಬೇಕು ಎಂದು ಸಲಹೆ ನೀಡಿದರು.

ಕಾಂಗ್ರೆಸ್‌ ಜನಧ್ವನಿ ಸಮಾವೇಶವನ್ನು ಮೊದಲ ಹಂತವಾಗಿ 100 ಕಡೆ ಆಯೋಜಿಸಲಾಗುತ್ತಿದ್ದು, ಕಲ್ಯಾಣ ಕರ್ನಾಟಕದಲ್ಲಿಯೂ ರೂಪುರೇಷೆ ಸಿದ್ಧತೆ ನಡೆದಿದೆ. ಬಿಜೆಪಿ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ವಚನ ಭ್ರಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೂ ನಿರಂತರ ಅನ್ಯಾಯ ಮಾಡುತ್ತಿದ್ದು, ಸಿದ್ದರಾಮಯ್ಯರ ಅವ ಧಿಯಲ್ಲಿ 7500 ಕೋಟಿ ರೂ. ಅನುದಾನ ಬಿಡುಗಡೆ ಆಗಿದ್ದು, ಅದರಲ್ಲಿ
5000 ಕೋಟಿಯಲ್ಲಿ ಕಾಮಗಾರಿಗಳು ನಡೆದಿವೆ. ಕೆಕೆಆರ್‌ ಡಿಬಿ ಅಡಿಯಲ್ಲಿ 1136 ಕೋಟಿ ಮಾತ್ರ ಬಿಡುಗಡೆ. ಈ ಸಲದ ಕಾಮಗಾರಿಗೆ ನಯಾಪೈಸೆ ಖರ್ಚಾಗಲ್ಲ. ಈ ಹಿಂದೆ ಪ್ರಾರಂಭವಾಗಿರುವ ಕಾಮಗಾರಿಗಳನ್ನ ತಮ್ಮದು ಎಂದು ಬಿಂಬಿಸಲಾಗುತ್ತಿದೆ. ಶೇ.40ರಿಂದ 50 ಹುದ್ದೆಗಳು ಖಾಲಿ ಇವೆ. ಹೀಗದ್ದಲ್ಲಿ ಅಭಿವೃದ್ಧಿ ಹೇಗೆ ಸಾಧ್ಯವೆಂದು ದೂರಿದರು.

ಡಿಸಿಸಿ ಅಧ್ಯಕ್ಷ ಮರಿಗೌಡ ಹುಲಕಲ್‌, ಮಾಜಿ ಎಂಎಲ್‌ಸಿ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು, ಶ್ರೀನಿವಾಸ ರೆಡ್ಡಿ ಕಂದಕೂರು, ಎ.ಸಿ. ಕಾಡೂರು, ಮಾಣಿಕರೆಡ್ಡಿ ಕುರಕುಂದಿ, ಲಾಯಕ್‌ ಹುಸೇನ್‌ ಬಾದಲ್‌, ಸುದರ್ಶನ್‌ ನಾಯಕ್‌, ಬಸು ಬಿಳಾರ, ಗಣೇಶ್‌ ದುಪ್ಪಲ್ಲಿ, ಮಹಿಪಾಲರೆಡ್ಡಿ ಪಾಟೀಲ್‌, ಹಣಮೇಗೌಡ ಮರಕಲ್‌, ಅಬ್ದುಲ್‌ ರಜಾಕ್‌, ರಾಘವೇಂದ್ರ ಮಾನಸಗಲ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next