Advertisement

ಕೆಲಸದ ಅವಧಿ ಹೆಚ್ಚಳ: ಹೈ ಎಚ್ಚರಿಕೆ

06:01 AM Jun 12, 2020 | Lakshmi GovindaRaj |

ಬೆಂಗಳೂರು: ಕೋವಿಡ್‌ 19 ಪರಿಸ್ಥಿತಿಯನ್ನು “ಸಾರ್ವಜನಿಕ ತುರ್ತು ಪರಿಸ್ಥಿತಿ” ಎಂದು ಪರಿಗಣಿಸಿ ಕೈಗಾರಿಕೆಗಳ ಕಾಯ್ದೆಯ ಸೆಕ್ಷನ್‌ 5ರನ್ವಯ ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸಿರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದಿರುವ  ಹೈಕೋರ್ಟ್‌, ಹೊಸ ನಿರ್ಧಾರ ಕೈಗೊಳ್ಳದಿದ್ದರೆ ತಡೆಯಾಜ್ಞೆ ಜಾರಿ ಮಾಡುವ ಎಚ್ಚರಿಕೆ ನೀಡಿದೆ.

Advertisement

ಕೈಗಾರಿಕೆಗಳಲ್ಲಿ ಕಾರ್ಮಿಕರ ಕೆಲಸದ ಅವಧಿ 9ರಿಂದ 10 ತಾಸುಗಳಿಗೆ ಹೆಚ್ಚಿಸಿ ಸರ್ಕಾರ ಹೊರಡಿಸಿರುವ ಅಧಿಸೂಚನೆ  ರದ್ದುಗೊಳಿಸಲು  ಬೆಂಗಳೂರಿನ ದೀಪಾಂಜಲಿ ನಗರದ ನಿವಾಸಿ ಎಚ್‌. ಮಾರುತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾ. ಎ.ಎಸ್‌. ಓಕಾ ಹಾಗೂ ನ್ಯಾ. ಇ.ಎಸ್‌.ಇಂದಿರೇಶ್‌ ಅವರಿದ್ದ ವಿಭಾಗೀಯ ಪೀಠ ವಿಚಾರಣೆ  ನಡೆಸಿತು. ಶುಕ್ರವಾರದೊಳಗೆ ಸರ್ಕಾರ ಹೊಸದಾಗಿ ತೀರ್ಮಾನ ತೆಗೆದುಕೊಳ್ಳದಿದ್ದರೆ ಅಧಿಸೂಚನೆಗೆ ತಡೆಯಾಜ್ಞೆ ನೀಡಲಾಗುವುದು ಎಂದು ಎಚ್ಚರಿಸಿತು.

Advertisement

Udayavani is now on Telegram. Click here to join our channel and stay updated with the latest news.

Next