Advertisement

ಸುತ್ತಲಿನ ಗ್ರಾಮಗಳಲ್ಲಿ ಹೆಚ್ಚಿದ ಆತಂಕ

04:33 PM May 07, 2020 | Suhan S |

ರೋಣ: ಪಕ್ಕದ ಬಾಗಲಕೋಟೆ ಜಿಲ್ಲೆಯ ಕೋವಿಡ್‌- 19 ಪಿ-607 ರೋಗಿಯೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಪಟ್ಟಣದ ಕೃಷ್ಣಾಪುರ ಗ್ರಾಮವನ್ನು ಜಿಲ್ಲಾಡಳಿತ ಸೀಲ್‌ ಡೌನ್‌ ಮಾಡಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಬಾಗಲಕೋಟೆ ಜಿಲ್ಲೆಯೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಯ ಗ್ರಾಮಸ್ಥರು ಗಡಿಭಾಗದ ಸಂಪರ್ಕ ರಸ್ತೆಗಳಿಗೆ ಮುಳ್ಳಿನ ಬೇಲಿ ಹಾಕಿ,  ವಾಹನ ಹಾಗೂ ಸಾರ್ವಜನಿಕ ಸಂಪರ್ಕಕ್ಕೆ ನಿರ್ಬಂಧ ಹೇರಿದ್ದಾರೆ.

Advertisement

ಬಾಗಲಕೋಟೆ ಜಿಲ್ಲೆಯ ಪಿ-607 ಜೊತೆಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಇಡೀ ಗ್ರಾಮವನ್ನು ಕಂಟೇನ್ಮೆಂಟ್‌ ಎಂದು ಘೋಷಿಸಿದೆ. ಅಲ್ಲದೇ ನೆರೆಯ ಬಾಗಲಕೋಟೆ ಜಿಲ್ಲೆಯಲ್ಲಿ ಕೋವಿಡ್‌- 19  ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಜಿಲ್ಲೆಯ ಗಡಿ ಭಾಗದ ಹಳ್ಳಿಗರಲ್ಲಿ ಆತಂಕ ಹೆಚ್ಚಿದೆ. ಹೀಗಾಗಿ ಜಿಲ್ಲೆಯ ಗಡಿಯಲ್ಲಿರುವ ಹೊಳೆಹಡಗಲಿ, ಬಿ.ಎಸ್‌. ಬೇಲೇರಿ ಹಾಗೂ ನಯನಾಪುರ ಗ್ರಾಮಸ್ಥರು ಬಾಗಲಕೋಟೆಗೆ ಸಂಪರ್ಕ ಕಲ್ಪಿಸುವ ಮಾರ್ಗಗಳಿಗೆ ಬೇಲಿ ಹಾಕಿ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ.

ಈ ಭಾಗದ ಗ್ರಾಮಗಳಲ್ಲಿ ಕೋವಿಡ್‌- 19 ಹರಡುವಿಕೆ ತಡೆಯಲು ತಾಲೂಕು ಆಡಳಿತ ಸಕಲ ಕ್ರಮ ಕೈಗೊಳ್ಳುತ್ತಿದೆ. ಈ ಭಾಗದ ಜೊತೆಗೆ ಕೋವಿಡ್‌- 19  ಹರಡದಂತೆ ತಡೆಯುವ ಕ್ರಮಗಳ ಬಗ್ಗೆ ತಹಶೀಲ್ದಾರ್‌ ಹಾಗೂ ಪೊಲೀಸ್‌ ಹಾಗೂ ಆಯಾ ಗ್ರಾಪಂ ಅಧಿಕಾರಿಗಳು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸುತ್ತಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next