Advertisement

Covid: ಕೇರಳದಲ್ಲಿ ಹೆಚ್ಚಿದ ಕೋವಿಡ್‌ ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

11:47 PM Dec 15, 2023 | Team Udayavani |

ಮಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ್ದ ಕೋವಿಡ್‌ ಇದೀಗ ಕೇರಳದಲ್ಲಿ ಮತ್ತೆ ಏರಿಕೆ ಕಂಡಿದೆ. ಸಿಂಗಾಪುರ, ಇಂಡೋನೇಷ್ಯಾ, ಮಲೇಷ್ಯಾ ಬಳಿಕ ಇದೀಗ ಕೇರಳದಲ್ಲಿ ಹೆಚ್ಚಿನ ಕೋವಿಡ್‌ ಪ್ರಕರಣ ದೃಢಪಡುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವಿಶೇಷ ನಿಗಾ ಇರಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

Advertisement

ದ.ಕ. ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಕಳೆದೆರಡು ದಿನಗಳಿಂದ ತಾಲೂಕಿನ ವೈದ್ಯರ ಸಭೆ ನಡೆಯುತ್ತಿದೆ. ಗುರುವಾರ ಬೆಳ್ತಂಗಡಿ ಮತ್ತು ಬಂಟ್ವಾಳ, ಶುಕ್ರವಾರ ಮಂಗಳೂರಿನಲ್ಲಿ ವೈದ್ಯರ ಸಭೆ ನಡೆಸಲಾಗಿದೆ. ಶನಿವಾರ ಪುತ್ತೂರು ಮತ್ತು ಸುಳ್ಯ ತಾಲೂಕಿನ ವೈದ್ಯರ ಸಭೆ ನಡೆಸಲಾಗುತ್ತದೆ. ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ, ಐಎಲ್‌ಐ, ಸಾರಿ ಪ್ರಕರಣಗಳನ್ನು ನಿಗಾ ಇಡುವಂತೆ ವೈದ್ಯರಿಗೆ ಸೂಚನೆ ನೀಡಲಾಗಿದೆ.

ದ.ಕ. ಜಿಲ್ಲಾ ವೈದ್ಯಾಧಿಕಾರಿ ಡಾ| ತಿಮ್ಮಯ್ಯ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಬೆಂಗಳೂರು ಸಹಿತ ದೇಶದ ವಿವಿಧ ಕಡೆ ಕೋವಿಡ್‌ ಪ್ರಕರಣ ಹೆಚ್ಚು ದಾಖಲಾಗುತ್ತಿದೆ ಎಂಬ ವರದಿ ಇದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಅಂತಹ ಗಾಬರಿ ಪರಿಸ್ಥಿತಿ ಇಲ್ಲ. ಜ್ವರ, ಕೆಮ್ಮು, ಶೀತ ಪ್ರಕರಣ ಹೆಚ್ಚಾಗಿ ವರದಿಯಾಗುತ್ತಿಲ್ಲ. ಆದರೂ ಮುಂಜಾಗ್ರತ ದೃಷ್ಟಿಯಿಂದ ನಾವು ಸನ್ನದ್ಧರಾಗಿದ್ದೇವೆ’ ಎಂದು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next