Advertisement
ರಾಜ್ಯ ಹೆದ್ದಾರಿಯಲ್ಲಿ ಕೆಲವೊಮ್ಮೆ ವಾಹನಗಳಿಗೆಅಡ್ಡಿ ಬಂದು ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿರುವ ನಿದರ್ಶನಗಳಿದ್ದು, ಬೀದಿ ನಾಯಿಗಳು, ಬಿಡಾಡಿ ದನಗಳ ನಿಯಂತ್ರಣಕ್ಕೆ ಪುರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿಯೇ ಅನೇಕ ಅವಘಡಗಳು ಸಂಭವಿಸುತ್ತಿವೆ ಎಂದು ಸಾರ್ವಜನಿಕರು ದೂರುತ್ತಾರೆ.
Related Articles
Advertisement
ಬಿಡಾಡಿ ದನಗಳ ಕಿರಿಕಿರಿ: ಪಟ್ಟಣದ ರಾಜ್ಯ ಹೆದ್ದಾರಿ, ಪ್ರಮುಖ ರಸ್ತೆಯಲ್ಲಿ ಬಿಡಾಡಿ ದನಗಳ ಕಿರಿಕಿರಿ ಹೆಚ್ಚಾಗಿದೆ. ರಸ್ತೆ ಮಧ್ಯೆ ನಿದ್ರೆಗೆ ಜಾರುವ ಹಿನ್ನೆಲೆ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಬೆಳಗ್ಗೆಯಿಂದ ರಾತ್ರಿವರೆಗೆ ರಸ್ತೆಯಲ್ಲೇ ಬಿಡಾಡಿ ದನಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಂಚಾರಕ್ಕೆ ತೊಂದರೆಯಾಗುತ್ತಿದೆ.
ಕಳೆದ ತಿಂಗಳ ಹಿಂದೆ ಪುರಸಭೆ ಅಧಿಕಾರಿಗಳುಬಿಡಾಡಿ ದನಗಳನ್ನು ತೆಗೆದುಕೊಂಡು ರಾಯಚೂರು ತಾಲೂಕಿನ ಗೋಶಾಲೆಗೆ ಕರೆದೊಯ್ಯಲಾಗಿತ್ತು. ಮಾಲೀಕರು ಕಾಡಿಬೇಡಿದ ನಂತರ ಪುನಃ ವಾಪಸ್ ಮಾಲೀಕರಿಗೆ ಒಪ್ಪಿಸಲಾಯಿತ್ತು. ಇದೀಗ ಮತ್ತೆ ಅದೇ ಸ್ಥಿತಿ ಮುಂದುವರಿದಿದೆ.
ಬಿಡಾಡಿ ದನಗಳನ್ನು ರಾಯಚೂರು ಗೋಶಾಲೆಗೆ ಕಳಿಸಲಾಗಿತ್ತು. ಮತ್ತೆ ರಸ್ತೆಯಲ್ಲಿ ಬಿಡುವುದಿಲ್ಲ ಎಂದು ಮಾಲೀಕರು ಹೇಳಿದ ನಂತರ ವಾಪಸ್ ತರಲಾಗಿತ್ತು. ಮತ್ತೆ ಸಮಸ್ಯೆ ಗಮನಕ್ಕೆ ಬಂದಿದ್ದು ಕ್ರಮ ವಹಿಸಲಾಗುವುದು. –ಶರಣಪ್ಪ, ಪುರಸಭೆ ಮುಖ್ಯಾಧಿಕಾರಿ