Advertisement

ಜಿಲ್ಲಾಡಳಿತ ವಿರುದ್ದ ದಸಂಸ ಅನಿರ್ದಿಷ್ಟಾವಧಿ ಧರಣಿ

01:46 PM Aug 12, 2017 | Team Udayavani |

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆ ದಲಿತ ಚಳವಳಿ ದಮನಕ್ಕೆ ಮುಂದಾಗಿವೆ ಎಂದು ಆರೋಪಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೋ.ಬಿ.ಕೃಷ್ಣಪ್ಪ ಬಣದ ಕಾರ್ಯಕರ್ತರು ಎಸಿ
ಕಚೇರಿ ಎದುರು ಧರಣಿ ಆರಂಭಿಸಿದರು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳಿಗೆ ಸರ್ಕಾರದಿಂದ ಮಂಜೂರಾಗಿರುವ ಕೋಟ್ಯಂತರ ರೂ. ಅನುದಾನವನ್ನು ದಲಿತರ ಅಭಿವೃದ್ಧಿಗೆ ಬಳಸದೇ ಹಣ ದುರುಪಯೋಗ ಮಾಡಿಕೊಳ್ಳಲಾಗಿದೆ. ಕೂಡಲೇ ಈ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಾಗೂ ದಲಿತ ಮುಖಂಡರ ವಿರುದ್ಧ ರೌಡಿ ಶೀಟರ್‌ ಪ್ರಕರಣಗಳನ್ನು ದಾಖಲಿಸುತ್ತಿರುವ ಪೊಲೀಸರ
ಕ್ರಮವನ್ನು ಖಂಡಿಸಿ ಧರಣಿ ನಡೆಸುತ್ತಿದ್ದಾರೆ. ಎಸಿ ಕಚೇರಿ ಎದುರು ಧರಣಿ: ಜಿಲ್ಲಾ ಕೇಂದ್ರದಲ್ಲಿ ಉಪಭಾಗಾಧಿಕಾರಿಗಳ ಕಚೇರಿ ಎದುರು ಕದಸಂಸ ರಾಜ್ಯ ಸಂಘಟನಾ ಸಂಚಾಲಕ ಬಿ.ಎನ್‌. ಗಂಗಾಧರಪ್ಪ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗಿದೆ. ಜಿಲ್ಲಾಡಳಿತ ದಲಿತರ ಸಮಸ್ಯೆಗಳಿಗೆ ಸ್ಪಂದಿಸುವುದರ ಬದಲು ದಲಿತ ಚಳವಳಿ ದಮನಕ್ಕೆ ಮುಂದಾಗಿದೆ. ದಲಿತರು ವಾಸ ಮಾಡುವ ಅನೇಕ ಕಡೆ ಮೂಲ ಸೌಕರ್ಯಗಳಿಲ್ಲ. ಬಗರ್‌ ಹುಕುಂ ಅಡಿ ಅರ್ಜಿ ಸಲ್ಲಿಸಿರುವ ದಲಿತರಿಗೆ ತುಂಡು ಭೂಮಿ ಮಂಜೂರು ಮಾಡಿಲ್ಲ. ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಗಳು ಮೂಲ ಸೌಕರ್ಯಗಳಿಲ್ಲದೇ ಅನಾಥಾಶ್ರಮಗಳಾಗಿವೆ. ಜಿಲ್ಲೆಯಲ್ಲಿ ಅಂಬೇಡ್ಕರ್‌, ಜಗಜೀವನರಾಂ, ವಾಲ್ಮೀಕಿ ಭವನಗಳ ನಿರ್ಮಾಣದಲ್ಲಿ ಅಕ್ರಮವೆಸಲಾಗಿದೆ.ಹಲವಾರು ಕಡೆ ಭವನ ನಿರ್ಮಿಸದೇ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಕದಸಂಸ ಮುಖಂಡರು ಆರೋಪಿಸಿದರು. ಧರಣಿ ಹಿಂಪಡೆಯಲ್ಲ: ಈ ವೇಳೆ ಮಾತನಾಡಿದ ಕದಸಂಸ ರಾಜ್ಯ ಸಂಘಟನಾ ಸಂಚಾಲಕ ಬಿ.ಎನ್‌. ಗಂಧಾಧರಪ್ಪ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆ ನಮ್ಮ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಎಚ್ಚರಿಸಿದರು. ಕದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಡಿ.ಎಂ.ನರಸಿಂಹಯ್ಯ, ತಾಲೂಕು ಸಂಚಾಲಕ ತಿಪ್ಪೇನಹಳ್ಳಿ ನಾರಾಯಣ್‌, ತಾಲೂಕು ಸಂಘಟನಾ ಸಂಚಾಲಕರಾದ ಎಸ್‌.ಎಂ.ರಾಜಣ್ಣ, ಜಿ.ಸಿ.ವೆಂಕಟೇಶ್‌, ಕಣಿತಹಳ್ಳಿ ಗಂಗಾಧರ್‌, ಕೊಳವನ ಹಳ್ಳಿ ನಾಗೇಶ್‌, ಆರ್‌.ಡಿ.ನಾಗರಾಜ್‌, ಮುದ್ದಲಹಳ್ಳಿ
ಹನುಮಪ್ಪ, ಬಿ.ಎನ್‌.ಹರೀಶ್‌ ಕುಮಾರ್‌, ನವಿಲುಗುರ್ಕಿ, ಶ್ರೀರಾಪುರ ಜಯರಾಮ್‌, ಮಲ್ಲಪ್ಪ, ಎನ್‌.ಶ್ರೀನಿವಾಸ್‌, ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next