Advertisement

ಬೆಳಗಾವಿ: ಧ್ವಜಾರೋಹಣ ನೆರವೇರಿಸಿದ ಸಚಿವ ರಮೇಶ್ ಜಾರಕಿಹೊಳಿ

10:43 AM Aug 15, 2020 | keerthan |

ಬೆಳಗಾವಿ: ಜಿಲ್ಲೆಯಾದ್ಯಂತ 74 ನೇ ಸ್ವಾತಂತ್ರ್ಯ ದಿನಾಚರಣೆಗೆ ಸಂಭ್ರಮದ ಚಾಲನೆ ನೀಡಲಾಯಿತು. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಳೆಯಲ್ಲೇ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೋವಿಡ್ ನಿಯಂತ್ರಣ ಮಾಡುವಲ್ಲಿ ನಮ್ಮ ಸರಕಾರ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಜನರು ಆತಂಕ ಪಡಬೇಕಿಲ್ಲ ಎಂದರು.

ಕೋವಿಡ್ ವೈರಸ್ ನಮಗೆ ಬಹಳ ಪಾಠ ಕಲಿಸಿದೆ. ನಮ್ಮ ಜೀವನದಲ್ಲಿ ಬದಲಾವಣೆ ತಂದಿದೆ. ಇದಕ್ಕೆ ಪೂರಕವಾಗಿ ಜನರ ನೆರವಿಗೆ ನಿಂತಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅನೇಕ ಯೋಜನೆಗಳನ್ನು ಜಾರಿಮಾಡಿದೆ ಎಂದರು.

ಪ್ರತಿ ವರ್ಷ ಕೃಷ್ಣಾ ನದಿಯಿಂದ ಉಂಟಾಗುವ ಪ್ರವಾಹದ ಆತಂಕವನ್ನು ಈ ಬಾರಿ ದೂರ ಮಾಡಲಾಗಿದೆ. ನೀರು ಬಿಡುಗಡೆ ಮಾಡುವ ಮುನ್ನ ಕರ್ನಾಟಕಕ್ಕೆ ಮಾಹಿತಿ ನೀಡುವಂತೆ ಮಹಾರಾಷ್ಟ್ರ ಸರಕಾರಕ್ಕೆ ಕೋರಲಾಗಿದ್ದು ಈ ಸಂಬಂಧ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next