Advertisement

BJP ಟಿಕೆಟ್‌ ಸಿಗದಿದ್ದರೆ ಚನ್ನಪಟ್ಟಣದಲ್ಲಿ ಸ್ವತಂತ್ರ ಸ್ಪರ್ಧೆ: ಯೋಗೇಶ್ವರ್‌

11:09 PM Aug 12, 2024 | Team Udayavani |

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ನಾನೂ ಒಬ್ಬ ಪ್ರಬಲ ಆಕಾಂಕ್ಷಿ ಎಂದಿರುವ ಸಿ.ಪಿ. ಯೋಗೇಶ್ವರ್‌, ಕುಮಾರಸ್ವಾಮಿ ಅವರ ಸಮೀಪದ ಪ್ರತಿಸ್ಪರ್ಧಿಯಾಗಿದ್ದ ನನಗೆ ಅವರಿಂದ ತೆರವಾದ ಸ್ಥಾನ ದಕ್ಕಬೇಕು. ಟಿಕೆಟ್‌ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸಿ ಮತ್ತೆ ಎನ್‌ಡಿಎ ಭಾಗವಾಗಬೇಕು ಎಂದುಕೊಳ್ಳುತ್ತೇನೆ. ಕಾಂಗ್ರೆಸ್‌ನಿಂದ ಯಾರೂ ನನ್ನನ್ನು ಸಂಪರ್ಕಿಸಿಲ್ಲ ಎಂದಿದ್ದಾರೆ.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೇ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುವ ನಿರೀಕ್ಷೆ ಇದೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಸಕ್ರಿಯವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆ.15 ರಂದು ಚನ್ನಪಟ್ಟಣದಲ್ಲೇ ಧ್ವಜಾರೋಹಣ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಷ್ಟೆಲ್ಲ ಆಗುತ್ತಿರುವಾಗ ಕುಮಾರಸ್ವಾಮಿಯೂ ಏನು ಹೇಳುತ್ತಿಲ್ಲ. ನಾವೂ ಸುಮ್ಮನಿದ್ದರೆ, ಕ್ಷೇತ್ರವು ಅನಾಯಾಸವಾಗಿ ಕಾಂಗ್ರೆಸ್‌ ಪಾಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next