Advertisement

ರಮೇಶ್ ಜಾರಕಿಹೊಳಿ ಮನವೊಲಿಕೆಗೆ ಪಕ್ಷೇತರ ಶಾಸಕರ ಪ್ರಯತ್ನ!

09:57 AM May 30, 2019 | Nagendra Trasi |

ಬೆಂಗಳೂರು:ಸಂಪುಟ ಪುನಾರಚನೆ ಕಸರತ್ತಿನ ಮೂಲಕ ಸಮ್ಮಿಶ್ರ ಸರಕಾರ ಉಳಿಸಿಕೊಳ್ಳುವ ಪ್ರಯತ್ನ ಬುಧವಾರವೂ ಮುಂದುವರಿದಿದ್ದು ಪಕ್ಷೇತರ ಶಾಸಕರಾದ ಶಂಕರ್ ಮತ್ತು ನಾಗೇಶ್ ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿ ಮನವೊಲಿಕೆ ಪ್ರಯತ್ನ ನಡೆಸಿದ್ದಾರೆ.

Advertisement

ರಮೇಶ್ ಜಾರಕಿಹೊಳಿಯನ್ನು ಭೇಟಿಯಾದ ಪಕ್ಷೇತರ ಶಾಸಕರು ರಾಜೀನಾಮೆ ನೀಡದಂತೆ ಮನವೊಲಿಕೆ ಮಾಡಿದ್ದಾರೆನ್ನಲಾಗಿದೆ. ಮಾತುಕತೆ ಬಳಿಕ ಪಕ್ಷೇತರ ಶಾಸಕರು ಮೈತ್ರಿ ಪಕ್ಷದ ಮುಖಂಡರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ.

ಕಗ್ಗಂಟಾದ ಸಂಪುಟ ವಿಸ್ತರಣೆ:

ಕುಮಾರಕೃಪಾ ಅತಿಥಿಗೃಹದಲ್ಲಿ ಬುಧವಾರ ಕರೆದಿದ್ದ ಉಭಯ ಪಕ್ಷಗಳ ನಾಯಕರ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ, ಕೆಸಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಡಿಕೆಶಿ, ಎಂಬಿ ಪಾಟೀಲ್ ಪಾಲ್ಗೊಂಡಿದ್ದರು. ಸಭೆಯಲ್ಲಿ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆದಿದ್ದು, ಯಾವುದೇ ಅಂತಿಮ ನಿರ್ಧಾರ ಇನ್ನೂ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next