Advertisement

ಪಕ್ಷೇತರರಿಗೆ ಸಚಿವ ಸ್ಥಾನ ; ಫಾರೂಕ್‌ಗಿಲ್ಲ ಮಂತ್ರಿ ಭಾಗ್ಯ

09:45 AM Jun 18, 2019 | Team Udayavani |

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಶುಕ್ರವಾರ ಆಗಿದ್ದು,ಪಕ್ಷೇತರ ಶಾಸಕರಾದ ಆರ್‌.ಶಂಕರ್‌ ಮತ್ತು ಎಚ್‌.ನಾಗೇಶ್‌ ಅವರು ರಾಜಭವನದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Advertisement

ವಜೂಭಾಯ್‌ವಾಲಾ ಅವರು ರಾಣಿ ಬೆನ್ನೂರು ಶಾಸಕ ಶಂಕರ್‌ ಮತ್ತು ಮುಳಬಾಗಿಲು ಶಾಸಕ ನಾಗೇಶ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.

ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸೇರಿದಂತೆ ಪ್ರಮುಖ ಸಚಿವರ ಭಾಗಿಯಾಗಿದ್ದರು.

Advertisement

ಆರ್‌.ಶಂಕರ್‌ ಅವರಿಗೆ ಕಾಂಗ್ರೆಸ್‌ ಕೋಟಾದಡಿ, ನಾಗೇಶ್‌ಗೆ ಜೆಡಿಎಸ್‌ ಕೋಟಾದಡಿ ಸಚಿವ ಸ್ಥಾನ ನೀಡಲಾಗಿದೆ.

ಮತ್‌ತೊಂದು ಸಚಿವ ಸ್ಥಾನವನ್ನು ಖಾಲಿ ಉಳಿಸಲಾಗಿದ್ದು, ಜೆಡಿಎಸ್‌ ನಾಯಕ ಬಿ.ಎಂ.ಫಾರೂಕ್‌ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ ಎನ್ನಲಾಗಿತ್ತು ಆದರೆ ಕೊನೆಕ್ಷಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next