Advertisement

PM Modi: ಇಂಡಿಯಾ ಮೈತ್ರಿಕೂಟ ಸನಾತನ ಸಂಸ್ಕೃತಿ ನಾಶ ಮಾಡಲು ಸಂಚು ರೂಪಿಸಿದೆ

04:41 PM Sep 14, 2023 | Team Udayavani |

ನವದೆಹಲಿ: ಇಂಡಿಯಾ (I.N.D.I.A) ಮೈತ್ರಿಕೂಟ ಭಾರತದ ಸನಾತನ ಸಂಸ್ಕೃತಿಯನ್ನು ನಾಶ ಮಾಡುವ ಸಂಚು ರೂಪಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ (ಸೆಪ್ಟೆಂಬರ್‌ 14) ವಾಗ್ದಾಳಿ ನಡೆಸಿದರು.

Advertisement

ಇದನ್ನೂ ಓದಿ:Asia Cup Semi Final: ಪಾಕ್-ಲಂಕಾ ಪಂದ್ಯಕ್ಕೆ ಮಳೆಕಾಟ; ಟಾಸ್ ಗೂ ಬಿಡದ ವರುಣ

ಅವರು ಚುನಾವಣೆಗೆ ಸಜ್ಜಾಗುತ್ತಿರುವ ಮಧ್ಯಪ್ರದೇಶದ ಬೀನಾ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ. ವಿಪಕ್ಷಗಳ ಮೈತ್ರಿಕೂಟಕ್ಕೆ ನಾಯಕನೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ವ್ಯಂಗ್ಯವಾಡಿದರು.

ಈ ಇಂಡಿಯಾ ಮೈತ್ರಿಕೂಟಕ್ಕೆ ಯಾವ ನಾಯಕನೂ ಇಲ್ಲ. ಆದರೆ ಅವರು ಭಾರತದ ಸಂಸ್ಕೃತಿಯ ಮೇಲೆ ದಾಳಿ ನಡೆಸುವ ರಹಸ್ಯ ಅಜೆಂಡಾ ಹೊಂದಿವೆ. ಅಷ್ಟೇ ಅಲ್ಲ ಇಂಡಿಯಾ ಮೈತ್ರಿಕೂಟ ಸನಾತನ ಸಂಸ್ಕೃತಿಯನ್ನು ನಾಶಗೊಳಿಸುವ ನಿರ್ಧಾರ ಕೈಗೊಂಡಿರುವುದಾಗಿ ಪ್ರಧಾನಿ ಮೋದಿ ದೂರಿದರು.

ಬಿನಾ ರಿಫೈನರಿಯಲ್ಲಿ ಪೆಟ್ರೋಕೆಮಿಕಲ್‌ ಕಾಂಪ್ಲೆಕ್ಸ್‌ ಮತ್ತು ರಾಜ್ಯದ ವಿವಿಧೆಡೆ ನೂತನ ಕೈಗಾರಿಕಾ ಯೋಜನೆ ಸೇರಿದಂತೆ ಸುಮಾರು 50,700 ಕೋಟಿಗೂ ಅಧಿಕ ಮೊತ್ತದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು.

Advertisement

ಈ ಸಂದರ್ಭದಲ್ಲಿ ರೋಡ್‌ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ನೆರೆದಿದ್ದ ಅಪಾರ ಪ್ರಮಾಣದ ಜನರು ಹೂವನ್ನು ಚೆಲ್ಲಿ ಸ್ವಾಗತಿಸಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next