Advertisement

ಇಂಡಿ:3 ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ತಾಯಿ;ಒಂದು ಪಾರು

11:00 AM Mar 13, 2018 | Team Udayavani |

ವಿಜಯಪುರ: ಜಿಲ್ಲೆಯ ಇಂಡಿ ರೈಲು ನಿಲ್ದಾಣದಲ್ಲಿ ಮಂಗಳವಾರ ನಡೆದ ದಾರುಣ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟಿದ್ದು, ಇಬ್ಬರು ಪುಟ್ಟ ಮಕ್ಕಳು ಮತ್ತು ಆಕೆ ದಾರುಣವಾಗಿ ಸಾವನ್ನಪ್ಪಿದರೆ, ಮಗಳು ಪಾರಾಗಿದ್ದಾಳೆ.  

Advertisement

ಇಂಡಿ ಸಾತಪೂರ ನಿವಾಸಿಯಾದ ಲಕ್ಷ್ಮೀ ಪ್ರಕಾಶ ಬೂದಿಹಾಳ (35) ಮಕ್ಕಳಾದ 
3 ವರ್ಷದ ಬೀರಪ್ಪ ,ಒಂದೂವರೆ ವರ್ಷದ ಅಂಕುಷ ಳೊಂದಿಗೆ ಸಾವಿಗೆ ಶರಣಾಗಿದ್ದಾಳೆ. ಈ ವೇಳೆ 7 ವರ್ಷದ ದಾನಮ್ಮ ಪಾರಾಗಿದ್ದಾಳೆ. 

ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೌಟುಂಬಿಕ ಕಲಹವೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎನ್ನಲಾಗಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next